Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಮಾರುತಿ ವೀಥಿಕಾದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ

0


ಉಡುಪಿ : ಮಾರುತಿ ವೀಥೀಕಾದ ಜೋಸ್ ಆಲುಕಾಸ್ ಆಭರಣದ ಮಳಿಗೆಯ ಮುಂಭಾಗದಲ್ಲಿ ಕನ್ನಡ ಚಿತ್ರನಟ ಕೊಡುಗೈ ದಾನಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಉದ್ಯಮಿ ಗುರುರಾಜ ಎಮ್ ಶೆಟ್ಟಿ ‌ರವರು ಪುಷ್ಪ ನಮನ ಸಲ್ಲಿಸಿ ದೀಪಬೆಳಗಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು, 21 ವರ್ಷ ಹಿಂದೆ ವರನಟ ಅಪರಣ ವಾದಾಗ ಹುಟ್ಟಿಕೊಂಡ ರಾಜಕುಮಾರ್ ಅವರ ಅಭಿಮಾನಿ ಸಂಘದ ಪತ್ರಿಕಾ ವರದಿಯ ದಾಖಲಾತಿಯನ್ನು ಪುನೀತ್ ರಾಜಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಈ ಹಿಂದೆ ನೀಡಿದ್ದೆವು ಎಂದು ನೆನಪಿಸಿಕೊಂಡರು. ಪುನೀತ್ ರಾಜ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ ಹಾಗೂ ಅವರ ಎರಡು ಕಣ್ಣುಗಳನ್ನು ದಾನ ಮಾಡುವ ಮೂಲಕ ಎಲ್ಲರಿಗೂ ಕಣ್ಣು ದಾನ ಮಹತ್ವದ್ದಾಗಿದೆ. ಅಭಿಮಾನಿಗಳಿಗೂ ಪ್ರೇರಣೆಯಾಗಿದೆ
ಎಂದರು.

ಈ ಸಂದರ್ಭದಲ್ಲಿ ಕೃಷ್ಣ ಡೈಮಂಡ್ ನ ಮಾಲಕರಾದ ರವೀಂದ್ರ, ಗುರುರಾಜ್ ಎಮ್ ಶೆಟ್ಟಿ, ಸುಧೀರ್ ಶೇಟ್, ಸುನಿಲ್ ಶೇಟ್, ರಾಜೇಶ್ ಕಲ್ಮಾಡಿ, ಚಂದ್ರ ಗಾಣಿಗ, ಗಾಯಕ ಹರೀಶ್ ನಿಟ್ಟೂರ್ ಪ್ರಸನ್ನ ರಾಜ್ ಮಟ್ಟದಬೆಟ್ಟು, ಕಮಲಾಕರ್, ಭಾಸ್ಕರ್ ಮೆಂಡನ್, ಪ್ರಶಾಂತ್,ಮೇಸ್ತ್ರಿ ಶಿವಪ್ಪ, ಉಮೇಶ್, ಗೋಕುಲ್ ಕಾಮತ್, ದಿನೇಶ್ ನಾಯಕ್, ರಾಮಾನಾಥ್ ನಾಯಕ್, ಸುಧೀರ್ ಶೆಟ್ಟಿ ಬನ್ನಂಜೆ ಮೊದಲಾದವರು ಶ್ರದ್ಧಾಂಜಲಿ ಅರ್ಪಿಸಿದರು. ಹರೀಶ್ ಶೇರಿಗಾರ್ ನಿಟ್ಟೂರುರವರು ಪುನೀತ್ ರಾಜ್ ಕುಮಾರ್ ನಟಿಸಿ ಹಾಡಿದ ಭಾಗ್ಯವಂತ ಚಿತ್ರದ ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ, ಹಾಡನ್ನು ಹಾಡಿ. ನೆನಪಿಸಿಕೊಂಡರು. ಈ ಕಾರ್ಯಕ್ರಮವನ್ನು ಗಣೇಶ ಸರಳೇಬೆಟ್ಟು ನಿರ್ವಹಿಸಿ, ರಾಜೇಶ್ ಕಲ್ಮಾಡಿ ವಂದಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!