Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಇಂದಿರಾ ಗಾಂಧಿ 36 ನೇ ಪುಣ್ಯ ತಿಥಿ ಅಂಗವಾಗಿ ನುಡಿ ನಮನ ಕಾರ್ಯಕ್ರಮ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮತ್ತು ಬ್ರಹ್ಮಾವರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿಯವರ 36 ನೇ ಪುಣ್ಯ ತಿಥಿಯ ಅಂಗವಾಗಿ ನುಡಿ ನಮನ ಕಾರ್ಯಕ್ರಮ ಬ್ರಹ್ಮಾವರ ಮದರ್ ಪ್ಯಾಲೇಸ್ ನಲ್ಲಿ ಭಾನುವಾರ ಜರುಗಿತು.
ಈ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಅಶೋಕ್ ಕುಮಾರ್ ಕೋಡವೂರು ಮಾತನಾಡಿ, ಇಂದಿರಾ ಗಾಂಧಿಯವರು ವಿಶ್ವಕ್ಕೆ ಮಹಿಳೆಯರಿಗೆ ನಾಯಕಿ. ಅವರು ಭಾರತಕ್ಕೆ ನೀಡಿದ ಅನೇಕ ಕೊಡುಗೆಗಳು ಇಂದಿಗೂ ಕೂಡಾ ಪ್ರಸ್ತುತವಾಗಿದೆ. ಕಾಂಗ್ರೆಸ್ ನ ಕೆಲವು ರಾಜಕೀಯ ನಾಯಕರು ಅಧಿಕಾರದ ಅಮಲಿನಲ್ಲಿರುವುದು ಮರೆತು ಕಾಂಗ್ರೇಸ್ ನ ನಿಜವಾದ ತತ್ವ ಆದರ್ಶಗಳನ್ನು ಜನರಿಗೆ ತಲುಪಿಸ ಬೇಕಾಗಿದೆ ಎಂದರು.


ಇದೇ ಸಂದರ್ಭದಲ್ಲಿ ವಾಲ್ಮೀಕಿ ಪ್ರಶಸ್ತೀ ಪುರಸ್ಕೃತೆ ಕೆಂಜೂರು ಗೌರಿ ಕೊರಗ ಇವರನ್ನು ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು. ಬ್ರಹ್ಮಾವರ ಭಾಗದ ಆಯ್ದ ಕೆಲವು ಕೊರಗ ಕುಟುಂಬಕ್ಕೆ ಕಿಟ್ ವಿತರಿಸಲಾಯಿತು.
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಗೀತಾ ವಾಗ್ಲೆ , ಬ್ರಹ್ಮಾವರ ಬ್ಲಾಕ್ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಗಾಯತ್ರಿ ಮತ್ತು ಕಾಂಗ್ರೆಸ್ ಮುಖಂಡರುಗಳಾದ ಭುಜಂಗ ಶೆಟ್ಟಿ , ನಿತ್ಯಾನಂದ ಶೆಟ್ಟಿ . ವೆರೋನಿಕಾ ಕರ್ನೇಲಿಯೋ, ದಿನಕರ ಹೇರೂರು ಇನ್ನಿತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!