Connect with us

Hi, what are you looking for?

Diksoochi News

ರಾಜ್ಯ

ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

0

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪುರಸ್ಕಾರ ನೀಡಲಾಗುವುದು ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಗೆ 2021ನೇ ಸಾಲಿನ ಮರಣೋತ್ತರ ಬಸವಶ್ರೀ ಪ್ರಶಸ್ತಿ ನೀಡುವುದಾಗಿ ತಿಳಿಸಿದ್ದಾರೆ.

ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ಪುನೀತ್ ರಾಜ್ ಕುಮಾರ್ ಬಾಲನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿಯೂ ಸಮಾಜ ಸೇವೆ  ಸಲ್ಲಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

Advertisement. Scroll to continue reading.

ಪ್ರಶಸ್ತಿಯು 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ನವೆಂಬರ್ 10 ರಂದು ಶರಣರು ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಈ ನಡುವೆ ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕು ಎಂದು ಕನ್ನಡರಿಗರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಷ್ಟ್ರೀಯ

0 ನವದೆಹಲಿ: ದೇಶಾದ್ಯಂತ ರಾಮನವಮಿ ಸಂಭ್ರಮದಿಂದ ಆಚರಿಸಲಾಗಿದೆ. ಇದೇ ಶುಭ ದಿನ ದೂರದರ್ಶನ ಹೊಸ ಲೋಗೋ ಅನಾವರಣ ಮಾಡಿದೆ. ಕೇಸರಿ ಬಣ್ಣದ ಹೊಸ ಲೋಗೋ ಹೊಸ ಸಂಚಲನ ಸೃಷ್ಟಿಸಿದೆ. ಲೋಗೋ ವಿನ್ಯಾಸದಲ್ಲಿ ಹೆಚ್ಚಿನ...

ರಾಜ್ಯ

0 ಮಂಡ್ಯ : ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ.  ಅವಳಿ ಮಕ್ಕಳು  ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿವೆ ಎಂಬ ಪ್ರಕರಣ...

error: Content is protected !!