Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಬಿಜೆಪಿ ಯುವಮೋರ್ಚಾ ವತಿಯಿಂದ ಫಲಾನುಭವಿಗಳಿಗೆ ಕನ್ನಡಕ ಹಸ್ತಾಂತರ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಡಿಯಲ್ಲಿ ಬಿಜೆಪಿ ಯುವಮೋರ್ಚಾ ಕುಂದಾಪುರ ಆಯೋಜಿಸಿದ್ದ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಕನ್ನಡಕ ಅವಶ್ಯಕತೆಯಿರುವ ಫಲಾನುಭವಿಗಳಿಗೆ ಇಂದು ಬಿದ್ಕಲ್ ಕಟ್ಟೆಯ ನಾಗಲಕ್ಷ್ಮೀ ಸಭಾಭವನದಲ್ಲಿ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು. 280 ಫಲಾನುಭವಿಗಳಿಗೆ ಕನ್ನಡಕ ವಿತರಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು ವಹಿಸಿದ್ದರು.
ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿಯ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ಚೇತನ್ ಬಂಗೇರ, ಸುನೀಲ್ ಖಾರ್ವಿ, ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಹಾಲಾಡಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಂಕರ್ ಮೊಗವೀರ, ಯುವಮೋರ್ಚಾ ಹಾಲಾಡಿ ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಹರ್ಷ ಪೂಜಾರಿ, ಪ್ರಸಾದ್ ನೇತ್ರಾಲಯದ ಕನ್ನಡಕ ವಿಭಾಗದ ಡಾ.ಹರೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಗಲಿದ ಯುವನಟ ಪುನೀತ್ ರಾಜ್ ಕುಮಾರ್ ಮತ್ತು ಯುವಮೋರ್ಚಾ ಕಾರ್ಯದರ್ಶಿ ದೀಕ್ಷಿತ್ ಶೆಟ್ಟಿ ಕೇಸನಮಕ್ಕಿ ಅವರ ತಂದೆ ಭಾಸ್ಕರ್ ಶೆಟ್ಟಿ ಯವರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆ ಯೊಂದಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.

ಮಹಿಳಾ ಮೋರ್ಚಾ ಕುಂದಾಪುರ ಅಧ್ಯಕ್ಷೆ ರೂಪಾ ಪೈ ವಂದೇ ಮಾತರಂ ಗೀತೆ ಹಾಡಿದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಖಾರ್ವಿ ಸ್ವಾಗತಿಸಿ, ಚೇತನ್ ನಿರೂಪಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

error: Content is protected !!