ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ ವತಿಯಿಂದ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಕಾನೂನು ಅರಿವು – ನೆರವು ಕಾರ್ಯಕ್ರಮದ ಮೋಟಾರು ಬೈಕ್ ರಾಲಿ ಶುಕ್ರವಾರ ನಡೆಯಿತು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ ಜೋಶಿ ಕುಂದಾಪುರ ನ್ಯಾಯಾಲಯದ ಆವರಣದಲ್ಲಿ ರಾಲಿಗೆ ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿದರು.
Advertisement. Scroll to continue reading.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ರಂಗೇಗೌಡ, ಪ್ರಧಾನ ಸಿವಿಲ್ ಮತ್ತು ಜೆ. ಎಮ್.ಎಫ್. ಸಿ ನ್ಯಾಯಾಧೀಶರಾದ ಧಾನೇಶ್ ಮುಗಳಿ, ಕುಂದಾಪುರ ಬಾರ್ ಎಸೋಸಿಯೇಷನ್ ನ ಅಧ್ಯಕ್ಷ ಎಸ್. ನಿರಂಜನ ಹೆಗ್ಡೆ, ಕುಂದಾಪುರ ಬಾರ್ ಎಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಎಚ್.ಪ್ರಮೋದ್ ಹಂದೆ ಮೊದಲಾದವರು ಉಪಸ್ಥಿತರಿದ್ದರು