ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಗೆ ಶ್ರದ್ಧಾಂಜಲಿ ಸಲ್ಲಿಸುವ ‘ಪುನೀತ ನಮನ’ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಅಪ್ಪುವಿನ ಜೀವನ ಸಾಧನೆಯ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಲಾಯಿತು. ನಟ ಸುದೀಪ್ ಧ್ವನಿಯಲ್ಲಿ ಮೂಡಿಬಂದ ಸಾಕ್ಷ್ಯಚಿತ್ರ ಪ್ರಸಾರವಾದ ನಂತರ, ಕ್ಯಾಂಡಲ್ ಹಚ್ಚಿ ಅಗಲಿದ ಕರುನಾಡ ಕಣ್ಮಣಿಗೆ ಗೀತ ನಮನವನ್ನು ಸಲ್ಲಿಸಲಾಯಿತು.
ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಅಪ್ಪುವಿನ ಪ್ರತಿಭೆಯ ಮೆಲುಕು ಹಾಕಿದರು. ಈ ವೇಳೆ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದರು. ಅಪ್ಪು ಹೆಸರು ಅಮರವಾಗಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ರಾಜ್ ಸ್ಮಾರಕದಂತೆ ಪುನೀತ್ ಸ್ಮಾರಕ ನಿರ್ಮಿಸುವ ಬಗ್ಗೆ ಭರವಸೆ ನೀಡಿದರು.
Advertisement. Scroll to continue reading.
In this article:Diksoochi news, Diksoochi t v, diksoochi udupi, Karnataka rathna, puneeth Rajkumar
Click to comment