Connect with us

Hi, what are you looking for?

Diksoochi News

ರಾಷ್ಟ್ರೀಯ

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ: ಇದೇ ಮೊದಲ ಬಾರಿಗೆ ಭಾರತದಲ್ಲಿ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚಳ

0

ಐದನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ (NFHS-5) 2ನೇ ಹಂತದ ವರದಿಯ ಪ್ರಕಾರ, ಮೊದಲ ಬಾರಿಗೆ ಭಾರತದಲ್ಲಿ 1,000 ಪುರುಷರಿಗೆ 1,020 ಮಹಿಳೆಯರಿದ್ದಾರೆ ಎಂದು ತಿಳಿದುಬಂದಿದೆ.

ಯಾವುದೇ ಎನ್ ಎಫ್ ಎಚ್ ಎಸ್ ಸಮೀಕ್ಷೆ ಅಥವಾ ಜನಗಣತಿಯಲ್ಲಿ ಇದೇ ಮೊದಲ ಬಾರಿಗೆ ಲಿಂಗಾನುಪಾತದಲ್ಲಿ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚಾಗಿರುವುದು ಕಂಡು ಬಂದಿದೆ.

2005-06ರ ಎನ್ ಎಫ್ ಎಚ್ ಎಸ್-3 ವರದಿಯಲ್ಲಿ ಈ ಅನುಪಾತವು 1000:1000 ಆಗಿತ್ತು. ಆದಾಗ್ಯೂ, ಇದು 2015-16 ರಲ್ಲಿ ಎನ್ ಎಫ್ ಎಚ್ ಎಸ್ ವರದಿಯಲ್ಲಿ 991:1000ಕ್ಕೆ ಇಳಿದಿತ್ತು.

Advertisement. Scroll to continue reading.

‘ಜನನದ ಸಮಯದಲ್ಲಿ ಸುಧಾರಿತ ಲಿಂಗಾನುಪಾತ ಮತ್ತು ಲಿಂಗಾನುಪಾತವು ಸಹ ಒಂದು ಗಮನಾರ್ಹ ಸಾಧನೆಯಾಗಿದೆ. ಜನಗಣತಿಯಿಂದ ನಿಜವಾದ ಚಿತ್ರಣ ಹೊರಹೊಮ್ಮಿದರೂ, ಮಹಿಳಾ ಸಬಲೀಕರಣಕ್ಕಾಗಿ ನಮ್ಮ ಕ್ರಮಗಳು ನಮ್ಮನ್ನ ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಿದ ಫಲಿತಾಂಶಗಳನ್ನ ಈಗ ನಾವು ಕಾಣಬಹುದಾಗಿದೆ’ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ನ ಮಿಷನ್ ನಿರ್ದೇಶಕ ವಿಕಾಸ್ ಶೀಲ್ ತಿಳಿಸಿದ್ದಾರೆ.

1020:1000 ಲಿಂಗಾನುಪಾತವು ದೇಶವು ಸಾಧಿಸಿದ ಮಹತ್ವದ ಮೈಲಿಗಲ್ಲಾಗಿದೆಯಾದ್ರೂ, ಕಳೆದ ಐದು ವರ್ಷಗಳಲ್ಲಿ ಜನನದ ಲಿಂಗ ಅನುಪಾತವು 929 ಆಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!