Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಕನ್ನಡದ ಸುದ್ದಿಗಳು ಹೆಚ್ಚು ಬಂದಲ್ಲಿ ಕನ್ನಡಿಗರ ಬೇಡಿಕೆಗೆ ಸರ್ಕಾರದಿಂದ ಮನ್ನಣೆ ಸಿಗಲಿದೆ: ಬಾ.ಸಾಮಗ

1

ಉಡುಪಿ : ರಾಷ್ಟ್ರ ಮಟ್ಟದ ಪತ್ರಿಕೆಗಳಲ್ಲಿ ಕನ್ನಡದ ಸುದ್ದಿಗಳು ಹೆಚ್ಚು ಬಂದರೆ, ಕನ್ನಡಿಗರ ಬೇಡಿಕೆಗಳಿಗೆ ಒಕ್ಕೂಟ ಸರಕಾರದ ಮನ್ನಣೆ ಸಿಗುತ್ತದೆ. ಧರಣಿ, ಸತ್ಯಾಗ್ರಹಗಳು ಜನರಿಗೆ ಸೌಲಭ್ಯ ಒದಗಿಸಲು ಸಹಾಯ ಮಾಡುತ್ತವೆ
ಎಂದು ದೆಹಲಿ ಕನ್ನಡಿಗ ಪತ್ರಿಕೆಯ ಸಂಪಾದಕ ಬಾ ಸಾಮಗ ಮಲ್ಪೆ ತಿಳಿಸಿದರು.


ಅವರು ರಥ ಬೀದಿ ಗೆಳೆಯರು ಮತ್ತು ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್ ಏರ್ಪಡಿಸಿದ್ದ ಮಾತು ಕತೆ ಕಾರ್ಯಕ್ರಮ ದಲ್ಲಿ ಉತ್ತರ ಭಾರತದ ಹಲವು ನಗರ ಗಳಲ್ಲಿ ತಾನು ಏರ್ಪಡಿಸಿದ್ದ ಕನ್ನಡ ತುಳು ಸಾಹಿತ್ಯ ಸಮ್ಮೇಳನಗಳ ಸ್ವಾರಸ್ಯ ದ ಅನುಭವಗಳನ್ನು ವಿವರಿಸಿದರು. ಸ್ವಾತಂತ್ರ್ಯ ಹೋರಾಟ ಗಾರ ಆಗಿದ್ದ ಯಕ್ಷಗಾನ ಕಲಾವಿದ ಮಲ್ಪೆ ಶಂಕರ ನಾರಾಯಣ ಸಾಮಗರ ಸಾಧನೆಗಳ ದಾಖಲೀಕರಣ ಆಗಬೇಕು ಎಂದು ಬಾ ಸಾಮಗ ವಿವರಿಸಿದರು.


ಇದೇ ಸಮಾರಂಭದಲ್ಲಿ ಲಾಕ್ ಡೌನ್ ದಿನಗಳಲ್ಲಿ ಮಲ್ಪೆ ಯಲ್ಲಿ ಅನ್ನ ದಾನ ಮಾಡಿದ ಮಲ್ಪೆ ಶಾರದಕ್ಕ ಅವರನ್ನು ಸನ್ಮಾನಿಸಲಾಯಿತು.



ಮುರಳೀಧರ ಉಪಾಧ್ಯ, ನರಸಿಂಹ ಮೂರ್ತಿ, ವಿಶ್ವನಾಥ ಶೆಣೈ, ರಾಘವೇಂದ್ರ ರಾವ್ ಸಂವಾದದಲ್ಲಿ
ಭಾಗವಹಿಸಿದ್ದರು. ಪ್ರೊ. ಸುಬ್ರಮಣ್ಯ ಜೋಶಿ ಸ್ವಾಗತಿಸಿ, ಜಿ. ಪಿ. ಪ್ರಭಾಕರ ಧನ್ಯವಾದ ಸಲ್ಲಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!