ಕಾಪು: ಟಿಪ್ಪರಿಗೆ ಕಾರೊಂದು ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಚ್ಚಿಲ ಸಮೀಪದ ಮೂಳೂರು ಸಿಎಸ್ಐ ಚರ್ಚಿನ ಮುಂಭಾಗದಲ್ಲಿ ಸಂಭವಿಸಿದೆ.
ಕಾಪು ನಿವಾಸಿ ಕಾರು ಚಾಲಕ ರವಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕಾರಿನಿಂದ ಹೊರತೆಗೆದು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಟಿಪ್ಪರ್ ವಾಹನವನ್ನು ನಿಲ್ಲಿಸಿ ಚಾಲಕ ಊಟಕ್ಕೆ ತೆರಳಿದ್ದು, ಇದೇ ಸಂದರ್ಭ ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಹಿಂಬದಿಗೆ ಗುದ್ದಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾಪು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿದ್ದಾರೆ.
Advertisement. Scroll to continue reading.