ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ರಾಷ್ಟ್ರೀಯ ಗ್ರಾಮೀಣ ಯೋಜನೆಯಡಿ (ಎನ್ .ಆರ್ .ಎಲ್ .ಎಂ ) ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ರುಡ್ಸೆಟ್ ಸಂಸ್ಥೆ ಇದರ ಆಶ್ರಯದಲ್ಲಿ ಗ್ರಾಮೀಣ ಪ್ರದೇಶದ ಸ್ವಸಹಾಯ ಸಂಘಗಳ ಮಹಿಳೆಯರಿಗಾಗಿ ಇಂದು ಲಘು ವಾಹನ ಚಾಲನೆ ತರಬೇತಿ ಶಿಬಿರವನ್ನು ಡಾ.ನವೀನ್ ಭಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸಂಜೀವಿನಿ ಸಂಘದ ಮಹಿಳೆಯರು ಆಸಕ್ತಿ ತೋರಿಸಿರವುದು ಪ್ರಶಂಸನೀಯ. ರಾಜ್ಯದಲ್ಲಿಯೇ ಗುರುತಿಸುವ ಮಟ್ಟಿಗೆ ಉಡುಪಿ ಜಿಲ್ಲೆಯ ಗ್ರಾಮೀಣ ಮಹಿಳೆಯರು ಮುಂದೆ ಬರುತ್ತಿದ್ದಾರೆ ಎಂದರು.
ತರಬೇತಿಯ ನಂತರ ಗ್ರಾಮ ಪಂಚಾಯತ್ ನ ಸ್ವಚ್ಛತಾ ವಾಹನದ ಚಾಲಕರಾಗಲು ಆಸಕ್ತಿ ಇರುವವರು, ಒಟ್ಟು 65 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಬಾಬು ಎಂ., ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವಾ, ಎನ್ .ಆರ್ .ಎಲ್ .ಎಂ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ , ಜಿಲ್ಲಾ ವ್ಯವಸ್ಥಾಪಕಿ ನವ್ಯಾ, ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ ಜೈನ್, ಉಪನ್ಯಾಸಕ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.