Connect with us

Hi, what are you looking for?

Diksoochi News

ರಾಜ್ಯ

ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ; ಥಿಯೇಟರ್, ಮಾಲ್, ಶಾಲೆಗಳಿಗೆ ಪೋಷಕರ ಪ್ರವೇಶಕ್ಕೆ ಎರಡು ಡೋಸ್ ಲಸಿಕೆ ಕಡ್ಡಾಯ : ಸಚಿವ ಅಶೋಕ್

1

ಬೆಂಗಳೂರು : ರಾಜ್ಯದಲ್ಲಿ ಒಮ್ರಿಕಾನ್ ವೈರಸ್ ನ ಎರಡು ಪ್ರಕರಣ ಪತ್ತೆಯಾಗಿದೆ. ವಿಶ್ವದಲ್ಲಿ 400 ಪ್ರಕರಣಗಳಿವೆ. ಆದರೆ, ಈ ವೈರಸ್ ತೀವ್ರವಾಗಿಲ್ಲ ಎಂಬ ಅನೌಪಚಾರಿಕ ಮಾಹಿತಿ ಬಂದಿದೆ ಎಂದು ಸಚಿವ ಅಶೋಕ್ ತಿಳಿಸಿದರು. ಅವರು ಸಿಎಂ ಹಾಗೂ ತಜ್ಞರೊಂದಿಗಿನ ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿದೇಶದಿಂದ ನಗರಕ್ಕೆ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ನಡೆಸಲಾಗುತ್ತದೆ. ಟೆಸ್ಟ್ ನಡೆಸಿ ನೆಗೆಟಿವ್ ವರದಿ ಬಂದ ಮೇಲಷ್ಟೆ ಹೊರಗೆ ಬಿಡಲಾಗುವುದು. ಹೆಚ್ಚು ಪರೀಕ್ಷೆಗಳು ಮಾಡುವುದು. ಥಿಯೇಟರ್, ಮಾಲ್, ಶಾಲೆಗೆ ಮಕ್ಕಳನ್ನು ಬಿಡುವ ಪೋಷಕರು ಎರಡು ಡೋಸ್ ಲಸಿಕೆ ಪಡೆದಿದ್ದಲ್ಲಿ ಮಾತ್ರ ಪ್ರವೇಶವಕಾಶ. ಶಾಲೆಗಳಲ್ಲಿ ಸಭೆ, ಸಮಾರಂಭಕ್ಕೆ ಅವಕಾಶವಿಲ್ಲ. ಮದುವೆಗಳಿಗೆ 500 ಜನರಿಗಷ್ಟೇ ಅವಕಾಶ ಎಂದು ಹೇಳಿದರು.

1 ಲಕ್ಷ ಪರೀಕ್ಷೆ:

Advertisement. Scroll to continue reading.

ಪ್ರತಿದಿನ 1 ಲಕ್ಷ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಐಸೋಲೇಷನ್ ವಾರ್ಡ್ ಮತ್ತೆ ತೆರೆಯಲು ಸೂಚನೆ. ಆಮ್ಲಜನಕ ಉತ್ಪಾದನೆ ಮೊದಲಾದ ವಿಚಾರಗಳಿಗೆ ಸಂಬಂಧಪಟ್ಟ ಘಟಕಗಳನ್ನು ಮತ್ತೆ ತೆರೆಯಲಾಗುವುದು. ಕಂಟ್ರೋಲ್ ರೂಂ ತೆರೆಯಲು ಸೂಚನೆ ನೀಡಲಾಗಿದೆ. ಜೌಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕೋವಿಡ್‌ ಟೆಸ್ಟ್‌ಗೆ ದರ ನಿಗದಿ:

ಏರ್‌ಪೋರ್ಟ್‌ ಕೋವಿಡ್‌ ಟೆಸ್ಟ್‌ಗೆ ದರ ನಿಗದಿ ಮಾಡಲಾಗಿದೆ. ಸಾಮಾನ್ಯ ಕೋವಿಡ್ ಪರೀಕ್ಷೆಗೆ‌ 500 ರೂಪಾಯಿ ದರ ಮತ್ತು ಅಬೇಟ್‌ ಮಾಡಿಸಲು 3 ಸಾವಿರ ರೂಪಾಯಿ ನಿಗದಿ ಮಾಡಲಾಗಿದೆ. ಇನ್ನು ಟೆಸ್ಟ್‌ ವರದಿ ಬರಲು 3 ರಿಂದ 4 ಗಂಟೆ ಸಮಯ ಕಾಯಬೇಕು ಎಂದು ಮಾಹಿತಿ ನೀಡಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!