ಬೆಂಗಳೂರು : ರಾಜ್ಯದ ಶಾಲೆ-ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇದು ಆತಂಕಕ್ಕೀಡು ಮಾಡಿದೆ. ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ
ಶಾಲೆಗಳಲ್ಲಿ ಹೊಸ ಮಾರ್ಗಸೂಚಿ ನಿರ್ವಹಣೆ ಬಗ್ಗೆ ಡಿಸೆಂಬರ್ 9 ರಂದು ಬಿ.ಸಿ.ನಾಗೇಶ್ ಅವರು ತಾಂತ್ರಿಕ ಸಲಹಾ ಸಮಿತಿ ತಜ್ಞರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.
ಇನ್ನು ಶಾಲಾ-ಕಾಲೇಜುಗಳಲ್ಲಿ ಅನುಸರಿಸುವ ಕ್ರಮಗಳು ಮತ್ತು ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಹಾಗೂ ವಸತಿ ಶಾಲೆಗಳಲ್ಲಿ ಯಾವೆಲ್ಲಾ ಮಾರ್ಗಸೂಚಿ ನೀಡಬೇಕು. ಗೈಡ್ ಲೈನ್ಸ್ ಪರಿಷ್ಕರಣೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಪ್ರಧಾನಿ ಕಾರ್ಯದರ್ಶಿಗೆ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.
Advertisement. Scroll to continue reading.