Connect with us

Hi, what are you looking for?

Diksoochi News

ರಾಷ್ಟ್ರೀಯ

ಡಿ.16 ರಿಂದ 20 ರ ವರೆಗೆ ದತ್ತಪೀಠಕ್ಕಿಲ್ಲ ಪ್ರವಾಸಿಗರಿಗೆ ಪ್ರವೇಶ

0

ಚಿಕ್ಕಮಗಳೂರು : ಕಾಫಿನಾಡಿನ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತ ಜಯಂತಿಗೆ ಬುಧವಾರದಿಂದ ಅಧಿಕೃತ ಚಾಲನೆ ದೊರೆತಿದೆ. ದತ್ತಪೀಠದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ದತ್ತ ಜಯಂತಿ ಹಿನ್ನೆಲೆ ಡಿ.16 ರಿಂದ 20 ರವರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ, ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಗುಂಡಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಡಿಸೆಂಬರ್ 17ಕ್ಕೆ ಅನಸೂಯ ಜಯಂತಿ, 18ರಂದು ಬೃಹತ್ ಶೋಭಾಯಾತ್ರೆ ಹಾಗೂ 19 ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ.

Advertisement. Scroll to continue reading.

ದತ್ತಜಯಂತಿ ಆಚರಣೆಯ ವೇಳೆ ಹಿಂದೆ ಆಗಿರುವ ಘಟನೆಗಳಿಂದ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!