ಚಿಕ್ಕಮಗಳೂರು : ಕಾಫಿನಾಡಿನ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯುವ ದತ್ತ ಜಯಂತಿಗೆ ಬುಧವಾರದಿಂದ ಅಧಿಕೃತ ಚಾಲನೆ ದೊರೆತಿದೆ. ದತ್ತಪೀಠದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ದತ್ತ ಜಯಂತಿ ಹಿನ್ನೆಲೆ ಡಿ.16 ರಿಂದ 20 ರವರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ, ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಗುಂಡಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
ಡಿಸೆಂಬರ್ 17ಕ್ಕೆ ಅನಸೂಯ ಜಯಂತಿ, 18ರಂದು ಬೃಹತ್ ಶೋಭಾಯಾತ್ರೆ ಹಾಗೂ 19 ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ.
Advertisement. Scroll to continue reading.
ದತ್ತಜಯಂತಿ ಆಚರಣೆಯ ವೇಳೆ ಹಿಂದೆ ಆಗಿರುವ ಘಟನೆಗಳಿಂದ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
In this article:Chikkamagaluru, Dhatatreya Peeta, Diksoochi news, diksoochi Tv, diksoochi udupi
Click to comment