ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರಿಂದ ಶಬರಿಮಲೆ ದೇಗುಲಕ್ಕೆ ತೆರಳಲು ಸರ್ಕಾರ ಅವಕಾಶ ನೀಡಿದೆ. ಕೇರಳದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆ ಅಯ್ಯಪ್ಪಸ್ವಾಮಿ ಸನ್ನಿಧಿಗೆ ತೆರಳುವುದಕ್ಕೆ ಮಾರ್ಗ ಓಪನ್ ಆಗಿದೆ.
ಪಂಪಾದಿಂದ ನೀಲಿಮಲ ಮಾರ್ಗದಲ್ಲಿ ತೆರಳಲು ಅವಕಾಶ ನೀಡಲಾಗುತ್ತಿದೆ.
ಮುಂಜಾಗೃತ ಕ್ರಮವಾಗಿ ಮಾರ್ಗ ಮಧ್ಯೆ ಆರೋಗ್ಯ ತಪಾಸಣೆಗೆ ಕೇಂದ್ರಗಳನ್ನು ತೆರೆಯಲಾಗಿದೆ ಎನ್ನಲಾಗಿದೆ.
ಕಳೆವ ವರ್ಷ ಶಬಮರಿಮಲೆಗೆ ಹೋಗಲು ಸಾಧ್ಯವಾಗದ ಕಾರಣ ಭಕ್ತರು ಚಿತ್ರದುರ್ಗ ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಭೇಟಿ ಕೊಡುತ್ತಿದ್ದರು. ಇರುಮುಡಿ ಹೊತ್ತು, ಶಬರಿಮಲೆ ಮಾದರಿಯಲ್ಲಿಯೇ 18 ಮೆಟ್ಟಿಲುಗಳನ್ನು ಅಲ್ಲಿ ಏರಿ ದೇವರ ದರ್ಶನ ಪಡೆಯುತ್ತಿದ್ದರು. ಈ ಬಾರಿ ಶಬರಿಮಲೆಗೆ ಭೇಟಿ ನೀಡಬಹುದಾಗಿದೆ.
Advertisement. Scroll to continue reading.
In this article:Diksoochi news, diksoochi Tv, diksoochi udupi, Kerala government, shabarimale
Click to comment