ನವದೆಹಲಿ: ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರ ಅವಧಿಯನ್ನು ಪ್ರಸ್ತುತ ಎರಡು ವರ್ಷಗಳಿಂದ ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.
ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ‘ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ, 2021’ನ್ನು ಮಂಡಿಸಿದರು.
‘ಸರ್ಕಾರವು ಭ್ರಷ್ಟಾಚಾರವನ್ನು ತಡೆಗಟ್ಟಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿಸಲು ಕೆಲಸ ಮಾಡುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ, ರಾಷ್ಟ್ರವು ಭ್ರಷ್ಟಾಚಾರ, ಕಪ್ಪುಹಣ ಮತ್ತು ಮಾದಕವಸ್ತು ಕಳ್ಳಸಾಗಣೆ, ಭಯೋತ್ಪಾದನೆ ಮತ್ತು ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದ ತ್ರಿವಳಿ ಬೆದರಿಕೆಯನ್ನು ಎದುರಿಸುತ್ತಿದೆ. ಇವೆಲ್ಲವೂ ದೇಶದ ಭದ್ರತೆ ಮತ್ತು ಆರ್ಥಿಕ ರಚನೆಗೆ ಬೆದರಿಕೆಯಾಗಿದೆ ಎಂದು ಮಸೂದೆ ಮಂಡಿಸುವ ವೇಳೆ ಸಚಿವ ಜಿತೇಂದ್ರ ಸಿಂಗ್ ಹೇಳಿದರು.
ಅಪರಾಧದ ವಿಧಾನವು ಬದಲಾಗಿದೆ ಮತ್ತು ಹೆಚ್ಚು ಅತ್ಯಾಧುನಿಕ ಮತ್ತು ರಚನಾತ್ಮಕವಾಗಿದೆ. ಇದು ಅಪರಾಧ ತನಿಖೆಯನ್ನು ಹೆಚ್ಚು ಕಷ್ಟಕರವಾದ ಕೆಲಸವನ್ನಾಗಿ ಮಾಡುತ್ತದೆ. ಈ ಮಸೂದೆಯು ತನಿಖೆಯ ವೇಗವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದರು.
ನಂತರ ಮಸೂದೆಯನ್ನು ಮೇಲ್ಮನೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯು ಈಗಾಗಲೇ ಡಿಸೆಂಬರ್ 3, 2021 ರಂದು ಮಸೂದೆಯನ್ನು ಅಂಗೀಕರಿಸಿದೆ.