Connect with us

Hi, what are you looking for?

Diksoochi News

ರಾಜ್ಯ

ಸಭಾಪತಿ ಆದೇಶ ಉಲ್ಲಂಘನೆ: ಎಸ್‌.ಆರ್‌ ಪಾಟೀಲ್‌ ಸೇರಿದಂತೆ ವಿಧಾನಪರಿಷತ್‌ನ 14 ಸದಸ್ಯರ ಅಮಾನತು

3

ಬೆಳಗಾವಿ : ಸಭಾಪತಿಗಳ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಎಸ್‌.ಆರ್‌ ಪಾಟೀಲ್‌ ಸೇರಿದಂತೆ ವಿಧಾನಪರಿಷತ್‌ನ 14 ಸದಸ್ಯರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ಸದನ ಬಾವಿಗೆ ಇಳಿದು ಪ್ರತಿಭಟನೆ ಮಾಡದಂತೆ ಸಭಾಪತಿ ಬಸವರಾಜ ಹೊರಟ್ಟಿ ವಿಪಕ್ಷ ನಾಯಕರಿಗೆ ಮನವಿ ಮಾಡಿದರು. ಆದರೆ, ಸಭಾಪತಿಗಳ ಮನವಿಗೆ ಸ್ಪಂದಿಸದ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ಮುಂದುವರೆಸಿದರು.

ಸಭಾಪತಿ ಬಸವರಾಜ ಹೊರಟ್ಟಿ, ಸದನದ ಬಾವಿಗಿಳಿದು ಪ್ರತಿಭಟಿಸಿದ 14 ಸದಸ್ಯರನ್ನು ಒಂದು ದಿನದ ಮಟ್ಟಿಗೆ ಕಲಾಪದಿಂದ ಅಮಾನತುಗೊಳಿಸುವುದಾಗಿ ಆದೇಶ ಹೊರಡಿಸಿದ್ದಾರೆ.

Advertisement. Scroll to continue reading.

ವೀಣಾ ಆಚ್ಚಯ್ಯ, ಸಿಎಂ ಇಬ್ರಾಹಿಂ, ಎಸ್‌.ಆರ್‌ ಪಾಟೀಲ್‌. ಪಿ.ಆರ್ ರಮೇಶ್‌, ಪ್ರತಾಪ್‌ ಚಂದ್ರ ಶೆಟ್ಟಿ, ನಾರಾಯಣ ಸ್ವಾಮಿ, ಯು.ಬಿ ವೆಂಕಟೇಶ್‌, ನಜೀರ್‌ ಆಹ್ಮದ್‌ ಸೇರಿದಂತೆ ಒಟ್ಟು 14 ಮಂದಿಯನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!