ದಾವಣಗೆರೆ: ಕೆಎಸ್ಆರ್ ಟಿಸಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಸವಳಂಗ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ನ್ಯಾಮತಿ ಬಳಿಯಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಎಡೆಹಳ್ಳಿಯ ಶಾರದಮ್ಮ, ಸುಮಾ, ದಾಕ್ಷಾಯಿಣಿ, ಕಾರು ಚಾಲಕ ಸುನೀಲ್ ಮೃತಪಟ್ಟವರು.
ನ್ಯಾಮತಿ ತಾಲೂಕಿನ ಹಳೆ ಜೋಗದಲ್ಲಿ ಇಂದು ನಡೆದಂತ ಆರತಕ್ಷತೆ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ಮೃತರು ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿಸಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿವೆ.
ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಹಾಗೂ ಮತ್ತೋರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ, ಚಾಲಕ ಸುನೀಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Advertisement. Scroll to continue reading.
In this article:davangere, Diksoochi news, diksoochi Tv, diksoochi udupi, Shivamogga
Click to comment