ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು, 5 ಹೊಸ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
ಉಡುಪಿ, ಧಾರವಾಡ, ಭದ್ರಾವತಿ, ಮಂಗಳೂರಿನಲ್ಲಿ ಓಮಿಕ್ರಾನ್ ಸೋಂಕು ತಗುಲಿರುವ ಬಗ್ಗೆ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಡಿ.19ರಂದು 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಧಾರವಾಡದಲ್ಲಿ 54 ವರ್ಷದ ಪುರುಷ, ಭದ್ರಾವತಿಯಲ್ಲಿ 20 ವರ್ಷದ ಯುವತಿ, ಉಡುಪಿಯಲ್ಲಿ 82 ವರ್ಷದ ಪುರುಷ ಮತ್ತು 72 ವರ್ಷದ ಮಹಿಳೆ ಹಾಗೂ ಮಂಗಳೂರಿನಲ್ಲಿ 19 ವರ್ಷದ ಯುವತಿಗೆ ಓಮಿಕ್ರಾನ್ ತಗುಲಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
Advertisement. Scroll to continue reading.