ಬೆಳಗಾವಿ: ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟ ಸುಟ್ಟು, ಬಸವಣ್ಣನ ಮೂರ್ತಿಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸಂಜು ಗುರವ್, ಸಚಿನ್ ಗುರವ್ ಹಾಗೂ ಗಣೇಶ್ ಪಡ್ನೇಕರ್ ಬಂಧಿತ ಆರೋಪಿಗಳು.
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದ ಬಳಿಕ, ಖಾನಾಪುರದ ಹಲಸಿಯ ಗ್ರಾಮಪಂಚಾಯ್ತಿ ಆವರಣದಲ್ಲಿನ ಕನ್ನಡ ಧ್ವಜಕ್ಕೆ ಬೆಂಕಿ ಹಾಗೂ ಬಸವಣ್ಣ ಮೂರ್ತಿಗೆ ಮಸಿ ಬಳಿಯಲಾಗಿತ್ತು.
Advertisement. Scroll to continue reading.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದಂತ ನಂದಗಡ ಪೊಲೀಸರು, ಕೃತ್ಯ ಎಸಗಿಸಿದ ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153ಎ, 295, 427, 120ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.