ಬೆಂಗಳೂರು : ವಿವಿಧ ತರಗತಿಗಳ ಪಠ್ಯಪುಸ್ತಕಗಳಲ್ಲಿ ಇರುವ ಬಾಬಾಬುಡನ್ ಗಿರಿ ಎಂಬ ಹೆಸರು ಬದಲಿಸಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.
ರಾಜ್ಯದ ಶಾಲಾ ತರಗತಿಗಳ ಪಠ್ಯಪುಸ್ತಕಗಳಲ್ಲಿ ಇರುವ ಬಾಬಾಬುಡನ್ ಗಿರಿ ಬದಲಾಗಿ ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ಇರುವಂತೆಯೇ ಪಠ್ಯಪುಸ್ತಕಗಳಲ್ಲಿಯೂ ಇರಬೇಕು ಎಂದು ಅವರು ಹೇಳಿದ್ದಾರೆ.
ಬಾಬಾಬುಡನ್ ಗಿರಿ ಬದಲಿಗೆ ಇನಾಮ್ ದತ್ತಾತ್ರೇಯ ಪೀಠ ಎಂದು ಮುದ್ರಿಸಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸಚಿವ ಬಿ.ಸಿ. ನಾಗೇಶ್ ಸೂಚನೆಯನ್ನು ನೀಡಿದ್ದು, ರಾಜ್ಯ ಪಠ್ಯಕ್ರಮದ 4, 6 ಮತ್ತು 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಇರುವ ಬಾಬಾಬುಡನ್ ಗಿರಿ ಹೆಸರು ಬದಲಿಸುವಂತೆ ಅವರು ಸೂಚನೆಯನ್ನು ನೀಡಿದ್ದಾರೆ.
4,6, ಮತ್ತು 9 ನೇ ತರಗತಿಗಳ ಪಠ್ಯ ಪುಸ್ತಕಗಳಲ್ಲಿ ಚಿಕ್ಕಮಗಳೂರಿನ ಪ್ರವಾಸಿ ತಾಣ ‘ಬಾಬಾಬುಡನ್ಗಿರಿ’ ಎಂದು ನಮೂದಿಸಲಾಗಿದ್ದು, ಸರ್ಕಾರಿ ದಾಖಲೆಗಳ ಪ್ರಕಾರ ಇನಾಮ್ ದತ್ತಾತ್ರೇಯ ಅಥವಾ ಚಂದ್ರದ್ರೋಣ ಪರ್ವತ ಎಂದು ಕರೆಯಲ್ಪಡುತ್ತಿವೆ. ಇದನ್ನು ಸರಿಪಡಿಸಬೇಕು ಎಂದು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದರು.