Connect with us

Hi, what are you looking for?

Diksoochi News

Uncategorized

ಐಸಿಸಿ ಮಹಿಳಾ ವಿಶ್ವಕಪ್ ಹಾಗೂ ನ್ಯೂಜಿಲೆಂಡ್ ಸರಣಿಗೆ ಭಾರತ ತಂಡ ಪ್ರಕಟ

2

ನವದೆಹಲಿ: ಮಾರ್ಚ್ 4 ಮತ್ತು ಏಪ್ರಿಲ್ 3ರ ನಡುವೆ ನ್ಯೂಜಿಲ್ಯಾಂಡ್ ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ವಿಶ್ವಕಪ್ 2022ಕ್ಕೆ ತಂಡದ ನಾಯಕಿ, ಉಪನಾಯಕಿ ಹಾಗೂ ಸದಸ್ಯರ ಹೆಸರು ಪ್ರಕಟಿಸಲಾಗಿದೆ.

ಒಟ್ಟು 15 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರ ಪ್ರಕಟಿಸಿದೆ.

ಅಖಿಲ ಭಾರತ ಮಹಿಳಾ ಹಿರಿಯ ಆಯ್ಕೆ ಸಮಿತಿಯು ಬುಧವಾರ ನ್ಯೂಜಿಲ್ಯಾಂಡ್ ಪ್ರವಾಸ ಮತ್ತು ಶೋಪೀಸ್ ಕಾರ್ಯಕ್ರಮಕ್ಕೆ ತಂಡಗಳನ್ನು ಆಯ್ಕೆ ಮಾಡಿದೆ ಎಂದು ಬಿಸಿಸಿಐ ತಿಳಿಸಿದ್ದು, ಮಿಥಾಲಿ ರಾಜ್ ನಾಯಕಿ, ಹರ್ಮನ್ ಪ್ರೀತ್ ಕೌರ್  ಉಪನಾಯಕಿಯಾಗಿರಲಿದ್ದಾರೆ.

Advertisement. Scroll to continue reading.

ವಿಶ್ವಕಪ್ ಗೆ ಹೋಗುವ ತಂಡವು ಫೆಬ್ರವರಿಯಲ್ಲಿ ನ್ಯೂಜಿಲ್ಯಾಂಡ್ ನಲ್ಲಿ 5 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದ್ದು, ಮಾರ್ಚ್ 6 ರಂದು ಮೌಂಟ್ ಮೌಂಗನುಯಿಯಲ್ಲಿರುವ ಬೇ ಓವಲ್ ನಲ್ಲಿ  ಪಾಕಿಸ್ತಾನದ ವಿರುದ್ಧ ವಿಶ್ವಕಪ್ ಪಂದ್ಯಾವಳಿಯನ್ನು ಪ್ರಾರಂಭಿಸಲಿದೆ.

ಪಂದ್ಯಾವಳಿಯ ನಾಕೌಟ್ ಹಂತಗಳಿಗೆ ಮೊದಲು ಭಾರತವು ರೌಂಡ್-ರಾಬಿನ್ ಸ್ವರೂಪದಲ್ಲಿ 7 ಪಂದ್ಯಗಳನ್ನು ಆಡಲಿದೆ.

ನ್ಯೂಜಿಲ್ಯಾಂಡ್ ಏಕದಿನ ಮತ್ತು ಮಹಿಳಾ ವಿಶ್ವಕಪ್ 2022ರ ಭಾರತ ತಂಡ ಪಟ್ಟಿ:

ಮಿಥಾಲಿ ರಾಜ್ (ನಾಯಕಿ), ಹರ್ಮನ್ ಪ್ರೀತ್ ಕೌರ್ (ಉಪನಾಯಕಿ), ಸ್ಮೃತಿ ಮಂಧಾನಾ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ್ ರಾಣಾ, ಜುಲನ್ ಗೋಸ್ವಾಮಿ, ಪೂಜಾ ವಸ್ತ್ರಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ತನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಜೇಶ್ವರಿ ಗಾಯಕವಾಡ್, ಪೂನಮ್ ಯಾದವ್.

Advertisement. Scroll to continue reading.

ಸ್ಟ್ಯಾಂಡ್ ಬೈ ಆಟಗಾರರು: ಎಸ್. ಮೇಘನಾ, ಏಕ್ತಾ ಬಿಷ್ಟ್, ಸಿಮ್ರಾನ್ ದಿಲ್ ಬಹದ್ದೂರ್.

ಟಿ20 ಪಂದ್ಯಗಳಿಗೆ ಭಾರತ ತಂಡದ ಪಟ್ಟಿ:

ಹರ್ಮನ್ ಪ್ರೀತ್ ಕೌರ್ (ನಾಯಕ), ಸ್ಮೃತಿ ಮಂಧಾನಾ (ಉಪನಾಯಕ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ್ ರಾಣಾ, ಪೂಜಾ ವಸ್ತ್ರಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ತನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಜೇಶ್ವರಿ ಗಾಯಕ್ ವಾಡ್, ಪೂನಮ್ ಯಾದವ್, ಏಕ್ತಾ ಬಿಷ್ಟ್, ಎಸ್.ಮೇಘನಾ, ಸಿಮ್ರಾನ್ ದಿಲ್ ಬಹದ್ದೂರ್.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!