ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನೂ ಮುಚ್ಚುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ರಾಜ್ಯದ ಅನೇಕ ಕಡೆಗಳಲ್ಲಿ ಕೋವಿಡ್-19 ಓಮಿಕ್ರಾನ್ ಉಲ್ಬಣಿಸುತ್ತಿರುವ ಹಿನ್ನಲೆಯಲ್ಲಿ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನು ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ.
ಈ ನಿಯಮವನ್ನು ಜಾರಿಗೊಳಿಸಿ, ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನು ಮುಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ ಈ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ.
ಈ ನಿಯಮವನ್ನು ಜಾರಿಗೊಳಿಸಿ, ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನು ಮುಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.