ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ವಲಯದ ವಲಯಾರಣ್ಯಾಧಿಕಾರಿಗಳಾದ ಪ್ರಭಾಕರ ಕುಲಾಲ ರವರು ಮುಂಚೂಣಿ ಸಿಬ್ಬಂದಿಗಳಿಗೆ ಅರಣ್ಯ ಬೆಂಕಿ ಬಗ್ಗೆ ಮಾಹಿತಿ ನೀಡಿ ಬೆಂಕಿಯಿಂದ ಅರಣ್ಯ ರಕ್ಷಿಸುವ ಬಗ್ಗೆಸಮರ್ಪಕ ರೀತಿಯಲ್ಲಿ ಕೆಲಸ ನಿರ್ವಹಿಸುವಂತೆ ಮತ್ತು ಪ್ರಸಕ್ತ ಸಾಲಿನ ಅರಣ್ಯದಲ್ಲಿ ಯಾವುದೇ ರೀತಿಯ ಬೆಂಕಿ ಬೀಳದಂತೆ ಮುಂಜಾಗ್ರತೆ ವಹಿಸಬೇಕಾಗಿ ಸಿಬ್ಬಂದಿಗಳಿಗೆ ಸೂಚಿಸಿದರು.
ವಲಯದ ಯಾವುದೇ ಅರಣ್ಯದಲ್ಲಿ ಬೆಂಕಿ ಬಿದ್ದ ತಕ್ಷಣ ತಮ್ಮ ವ್ಯಾಪ್ತಿಯಲ್ಲಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಜಾಗೃತಿ ಮೂಡಿಸುವುದು ಮತ್ತು ಕೂಡಲೇ ಬೆಂಕಿ ಆರಿಸುವ ಬಗ್ಗೆ ಕ್ರಮ ಕೈಗೊಳ್ಳುವುದೆಂದು ಸೂಚಿಸಿದರು.
Advertisement. Scroll to continue reading.
ಬೆಂಕಿ ಕಂಡ ಕೂಡಲೇ ಸಾರ್ವಜನಿಕರು ಅರಣ್ಯ ಇಲಾಖೆಗೆ ತಕ್ಷಣ ಮಾಹಿತಿ ನೀಡುವಂತೆ ಕೋರಲಾಗಿದೆ.