ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಶಿವಪುರ ಗ್ರಾಮದ ಕಾಳಾಯಿ ಮುಳ್ಳುಗುಡ್ಡೆಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರವಿರಾಜ ಶೆಟ್ಟಿಗಾರ ಮೃತ ವ್ಯಕ್ತಿ.
ಮೃತರ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಹಿಂದಲೆಯಲ್ಲಿ ರಕ್ತ ಗಾಯ ಕಂಡು ಬಂದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿದೆ. ಅವರಿಗೆ ಮನೆಯ ಮಾಡನ್ನು ಕಿತ್ತ ವಿಚಾರದಲ್ಲಿ ಸಹೋದರನೊಂದಿಗೆ ವೈಮನಸ್ಸು ಇತ್ತು ಎನ್ನಲಾಗಿದೆ.
Advertisement. Scroll to continue reading.
ಹೀಗಾಗಿ ಸಹೋದರನೇ ಕೊಲೆಗೈದಿದ್ದಾನೆ ಎಂದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್ಪಿ ಭೇಟಿ :
ಇಂದು ಘಟನೆ ನಡೆದ ಸ್ಥಳಕ್ಕೆ ಎಸ್ಪಿ ಎನ್. ವಿಷ್ಣುವರ್ಧನ್ ಹಾಗೂ ಎಎಸ್ಪಿ ಕುಮಾರ ಚಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Advertisement. Scroll to continue reading.