Connect with us

Hi, what are you looking for?

Diksoochi News

ರಾಜ್ಯ

ದಾವಣಗೆರೆ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧ ದಂಪತಿಯ ಕೊಲೆ

2

ದಾವಣಗೆರೆ : ಮಾರಕಾಸ್ತ್ರಗಳಿಂದ ವೃದ್ಧ ದಂಪತಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಎಲೆಬೇತೂರು ಗ್ರಾಮದಲ್ಲಿ ನಡೆದಿದೆ.

ಎಲೆ ಬೇತೂರು ಗ್ರಾಮದ ಗುರುಸಿದ್ದಯ್ಯ (80) ಹಾಗೂ ಸರೋಜಮ್ಮ (75) ಕೊಲೆಯಾದ ದಂಪತಿ.

ದಂಪತಿಗೆ ಮೂರು ಹೆಣ್ಣು ಮಕ್ಕಳಿದ್ದು, ಮೂವರಿಗೂ ಮದುವೆ ಮಾಡಿಕೊಟ್ಟಿದ್ದರು. ಮನೆಯಲ್ಲಿ ಇಬ್ಬರೇ ವಾಸ ಮಾಡುತ್ತಿದ್ದರು.

Advertisement. Scroll to continue reading.


ಸೋಮವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಪಕ್ಕದ ಮನೆಯವರು ಬೆಳಿಗ್ಗೆ ಸರೋಜಮ್ಮ ಅವರನ್ನು ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ಗ್ರಾಮಾಂತರ  ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!