ಬ್ರಹ್ಮಾವರ : ಬಾಳ್ಕುದ್ರು ಸ.ಹಿ.ಪ್ರಾ. ಶಾಲೆಯ ನೂತನ ಸಭಾಭವನದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಐರೋಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಗೀತಾ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭ ಸಭಾಭವನ ನಿರ್ಮಾಣ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಲ್ಲಿ ಮುಖ್ಯಪಾತ್ರವಹಿಸಿದ ಸುರೇಶ್ ಪೂಜಾರಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ನಟರಾಜ ಗಾಣಿಗ, ರೊಟೇರಿಯನ್ ರಾಜಾರಾಮ್ ಭಟ್, ಇಬ್ರಾಹಿಮ್ ಸಾಹೇಬ್, ನಾರಾಯಣ ಪೂಜಾರಿ, ಶಿಕ್ಷಣಾಧಿಕಾರಿ ಬಿ.ಟಿ. ನಾಯ್ಕ್, ಸಿ ಆರ್ ಪಿ ಅನುಪಮ, ನಿವೃತ್ತ ಮುಖ್ಯೋಪಾಧ್ಯಾಯಿನಿ ಶಶಿಕಲಾ, ಎಸ್ ಡಿ ಎಂ ಸಿ ಅಧ್ಯಕ್ಷೆ ಕುಸುಮ, ಉಪಾಧ್ಯಕ್ಷೆ ಸೌಮ್ಯ ದೇವಾಡಿಗ ಉಪಸ್ಥಿತರಿದ್ದರು.
Advertisement. Scroll to continue reading.
ಮುಖ್ಯೋಪಾಧ್ಯಾಯ ಶ್ರೀಕಾಂತ್ ಸಾಮಂತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಉಷಾ ಸನ್ಮಾನಿತರನ್ನು ಪರಿಚಯಿಸಿದರು. ಸಹ ಶಿಕ್ಷಕಿ ರಾಧಿಕಾರವರು ವಂದಿಸಿದರು.