Connect with us

Hi, what are you looking for?

Diksoochi News

ಕರಾವಳಿ

ಉಚ್ಚಿಲ: ಸ್ಥಗಿತಗೊಂಡಿದ್ದ ಉಚ್ಚಿಲ-ಮುದರಂಗಡಿ ರಸ್ತೆ ಕಾಮಗಾರಿಗೆ ಮತ್ತೆ ಚಾಲನೆ

2

ಕಾಪು : ಕಳೆದ ಒಂದೂವರೆ ವರ್ಷಗಳಿಂದ ಸ್ಥಗಿತಗೊಂಡಿದ್ದ ಉಚ್ಚಿಲ-ಮುದರಂಗಡಿ ರಸ್ತೆ ಅಗಲೀಕರಣ ಕಾಮಗಾರಿ ಇದೀಗ ಪುನಃ ಆರಂಭಗೊಂಡಿದೆ.

ಇತ್ತೀಚೆಗೆ ವಾಹನ ಸಂಚಾರ ಜನದಟ್ಟಣೆ ಹೆಚ್ಚುತ್ತಿದ್ದು, ಕೆಲವೊಂದು ರಸ್ತೆಗಳನ್ನು ಅನಿವಾರ್ಯವಾಗಿ ಸಾರ್ವಜನಿಕ ಹಿತದೃಷ್ಠಿಯಿಂದ ಅಗಲೀಕರಣ ಮಾಡಲಾಗುತ್ತಿದ್ದು,ಅದರಂತೆ ಕಳೆದ ಒಂದೂವರೆ ವರ್ಷಗಳ ಹಿಂದೆ ಉಚ್ಚಿಲ-ಮುದರಂಗಡಿ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದ್ದು,ಮೋರಿ ನಿರ್ಮಿಸಿ,ರಸ್ತೆಯ ಇಕ್ಕೆಲಗಳಲ್ಲಿ ಅಗೆದು ಜಲ್ಲಿ ತುಂಬಿದ ಬಳಿಕ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿತ್ತು. ಇದರಿಂದಾಗಿ ವಾಹನ ಸಂಚಾರಿಗಳು,ಪಾದಚಾರಿಗಳು ಬಹಳಷ್ಟು ಸಮಸ್ಯೆಗೊಳಗಾಗಿದ್ದರು.ಹಲವಾರು ಬಾರಿ ಈ ಬಗ್ಗೆ ಸಂಬಂಧಿತರಿಗೆ ದೂರು ನೀಡಲಾಗಿತ್ತು. ಇದೀಗ ಕಾಮಗಾರಿಗೆ ಮತ್ತೆ ಚಾಲನೆ ನೀಡುವ ಮೂಲಕ ಜನ ನಿಟ್ಟುಸಿರು ಬಿಡುವಂತಾಗಿದೆ.

ಈ ಬಗ್ಗೆ ಬೆಳಪು ಗ್ರಾ.ಪಂ ಮಾಜಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಮಾತನಾಡಿ, ಬಹುಕಾಲದ ನಿರೀಕ್ಷೆಯ ಉಚ್ಚಿಲ-ಮುದರಂಗಡಿ ರಸ್ತೆ ಕಾಮಗಾರಿ ಮತ್ತೆ ಆರಂಭಗೊಂಡಿದೆ.ಈಗಾಗಲೇ ಬೆಳಪುವಿನಲ್ಲಿ ಕೈಗಾರಿಕಾ ಪಾರ್ಕ್,ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ,ಪಾಲಿಟೆಕ್ನಿಕ್ ಕಾಲೇಜು ಕಾರ್ಯಾಚರಿಸುತ್ತಿದೆ. ಅದಕ್ಕೆ ಪೂರಕವಾಗಿ ಸಮರ್ಪಕವಾದ ರಸ್ತೆ ನಿರ್ಮಾಣಕ್ಕಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಆಡಳಿತಾವಧಿಯಲ್ಲಿ 9 ಮೀ.ರಸ್ತೆ ಅಗಲೀಕರಣಕ್ಕೆ ಸುಮಾರು 3 ಕೋಟಿ ರೂ. ಮಂಜೂರಾತಿ ಮಾಡಲಾಗಿತ್ತು.

ಇದೀಗ ಲಾಲಾಜಿ ಆರ್ ಮೆಂಡನ್ ರವರು ಶಾಸಕರಾದ ಬಳಿಕ ಮರು ಟೆಂಡರ್ ಕರೆಯಲಾಗಿದ್ದು,ರಸ್ತೆ ಅಗಲೀಕರಣದೊಂದಿಗೆ ಚರಂಡಿ, ಮೋರಿ ನಿರ್ಮಾಣ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಶೀಘ್ರವಾಗಿ ರಸ್ತೆ ಕಾಮಗಾರಿ ಪೂರ್ತಿಗೊಳಿಸುವಂತೆ ಗುತ್ತಿದಾರರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!