Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರು : ಚಿತ್ರಕಲಾ ಪರಿಷತ್ ನಲ್ಲಿ ಆರ್ಟಿಸಾನ್ಸ್‌ ಬಜಾರ್‌ ಕರಕುಶಲ ಮೇಳ: ಸಚಿವ ಸುನಿಲ್ ಕುಮಾರ್ ಚಾಲನೆ

2

ವರದಿ : ದಿನೇಶ್ ರಾಯಪ್ಪನಮಠ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ‘ಇಂಡಿಯನ್‌ ಆರ್ಟಿಸಾನ್ಸ್‌ ಬಜಾರ್‌’ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದ್ದು, ಕನ್ನಡ‌ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಶುಕ್ರವಾರ ಚಾಲನೆ ನೀಡಿದರು.

ಮೇಳವು ಫೆ.13 ರವರೆಗೆ ನಡೆಯಲಿದ್ದು, ದೇಶದ ನಾನಾ ಭಾಗಗಳ ವಿಶೇಷ ಉತ್ಪನ್ನಗಳು ಮೇಳದಲ್ಲಿವೆ. ಉದ್ಘಾಟನೆ ವೇಳೆ ನಟಿಯರಾದ ವಾಣಿಶ್ರೀ, ದ್ರವ್ಯಾ ಶೆಟ್ಟಿ ಪಾಲ್ಗೊಂಡು, ‘ಚಿತ್ರಕಲಾ ಪರಿಷತ್ ನಲ್ಲಿ ನಡೆಯುತ್ತಿರುವ ಮೇಳವು ಆಕರ್ಷಕವಾಗಿದ್ದು, ಒಂದೇ ಸೂರಿನಡಿ ಎಲ್ಲಾ ವಸ್ತುಗಳೂ ಸಿಗಲಿವೆ. ಹೆಚ್ಚು ಹೆಚ್ಚು ಗ್ರಾಹಕರು ಭಾಗವಹಿಸಿ, ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸಬೇಕು. ಕೋವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮೇಳ ನಡೆಯುತ್ತಿದೆ. ಹೀಗಾಗಿ ಗ್ರಾಹಕರು ನಿರಾತಂಕವಾಗಿ ಪಾಲ್ಗೊಳ್ಳಬಹುದು’ ಎಂದು ನಟಿಯರಿಬ್ಬರೂ ಗ್ರಾಹಕರನ್ನು ಆಹ್ವಾನಿಸಿದರು.

Advertisement. Scroll to continue reading.

ಬಗೆ ಬಗೆಯ ಸೀರೆಗಳು, ಅಂದದ ಕರಕುಶಲ ವಸ್ತುಗಳು, ಮರದ ಆಟಿಕೆಗಳು, ಆಭರಣಗಳು, ಅಲಂಕಾರಿಕ ಬೆಡ್ ಶಿಟ್ ಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ಬಗೆ ಬಗೆಯ ಉತ್ಪನ್ನಗಳು ಚಿತ್ರಕಲಾ ಪರಿಷತ್ ನಲ್ಲಿ ಗ್ರಾಹಕರ ಗಮನ ಸೆಳೆಯುತ್ತಿವೆ. ದೇಶದ ನಾನಾ ಭಾಗಗಳಿಂದ ಕಲಾವಿದರು ಆಗಮಿಸಿದ್ದು, 80ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ. ಕಲಾವಿದರು ತಮ್ಮ ಕಲಾಕೃತಿಗಳು ಹಾಗೂ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವರು.

ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.
ಟೇಬಲ್ ಮತ್ತು ನೆಲದ ಮೇಲೆ ಹಾಸುವಂತಹ ಮ್ಯಾಟ್‍ಗಳು ಹಾಗೂ ಗೋಡೆಯ ಮೇಲೆ ನೇತು ಹಾಕುವ ಮ್ಯಾಟ್‍ಗಳು ಇಲ್ಲಿ ಲಭ್ಯವಿವೆ. ಮಧುಬನಿ ಕಲಾ ಪ್ರಕಾರದ ವಸ್ತುಗಳು ಇಲ್ಲಿ ಲಭ್ಯವಿವೆ.

ಇದೇ ವೇಳೆ ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ. ಬಿ.ಎಲ್. ಶಂಕರ್, ಪರಿಷತ್ ನ ಪೃಧಾನ ಕಾರ್ಯದರ್ಶಿ ಕೆ.ಎಸ್. ಅಪ್ಪಾಜಯ್ಯ ಮತ್ತಿತರರು ಪಾಲ್ಗೊಂಡಿದ್ದರು.


Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!