Connect with us

Hi, what are you looking for?

Diksoochi News

ರಾಜ್ಯ

ರಾಜ್ಯದ ಇತರ ಜಿಲ್ಲೆಗಳಿಗೂ ಹಬ್ಬಿದ ಕೇಸರಿ vs ಹಿಜಾಬ್ ಸಂಘರ್ಷ

1

ವಿಜಯಪುರ: ಉಡುಪಿ ಕಾಲೇಜಿನಲ್ಲಿ ಶುರುವಾದಂತಹ ಹಿಜಾಬ್ ವಿವಾದ ಈಗ ರಾಜ್ಯದ ಇತರೆ ಜಿಲ್ಲೆಗಳಿಗೂ ಹಬ್ಬಿದೆ. ವಿಜಯಪುರ, ಹಾಸನ, ಬೆಳಗಾವಿ, ಶಿವಮೊಗ್ಗ,ಬಾಗಲಕೋಟೆ ಮಂಡ್ಯ ಕಾಲೇಜೊಂದರ ವಿದ್ಯಾರ್ಥಿಗಳೂ ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ, ಕಾಲೇಜಿಗೆ ಬಂದಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿನ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಶಾಂತೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಇಂದು ಹಿಜಾಬ್ ವಿರೋಧಿಸಿ, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಹಾಸನದಲ್ಲೂ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದರೆ, ವಿದ್ಯಾರ್ಥಿಗಳು ಶಾಲು ಧರಿಸಿ ಬಂದಿದ್ದಾರೆ. ಒಂದೇ ಕೊಠಡಿಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಬಾಗಲಕೋಟೆ ಗುಡೂರು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು ಧರಿಸಿ ಬಂದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!