Connect with us

Hi, what are you looking for?

Diksoochi News

ಕರಾವಳಿ

ಶಾಂತಿ ಸುವ್ಯವಸ್ಥೆ ಕಾಪಾಡಲು ಗಂಗೊಳ್ಳಿಯ ಪ್ರಮುಖ ಬೀದಿಗಳಲ್ಲಿ ಪೊಲೀಸರಿಂದ ಪಥಸಂಚಲನ

0

ವರದಿ : ದಿನೇಶ್ ರಾಯಪ್ಪನಮಠ

ಗಂಗೊಳ್ಳಿ : ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗಂಗೊಳ್ಳಿಯ ಪ್ರಮುಖ ಬೀದಿಗಳಲ್ಲಿ ಪೊಲೀಸರು ಶನಿವಾರ ಪಥಸಂಚಲನ ನಡೆಸಿದರು.
ಕಳೆದ ಕೆಲವು ದಿನಗಳ ಹಿಂದೆ ಅಶಾಂತಿ ಮೂಡಿಸಲು ಕಾರಣವಾಗಿರುವ ಹಿಜಾಬ್-ಕೇಸರಿ ವಿವಾದದಿಂದ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳನ್ನು ಮೂರು ದಿನಗಳ ಕಾಲ ಮುಚ್ಚಲಾಗಿದ್ದು, ಸೋಮವಾರದಿಂದ ಪ್ರೌಢಶಾಲೆಗಳ ಆರಂಭಕ್ಕೆ ಸರಕಾರ ಮುಂದಾಗಿದೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಧೈರ್ಯ ಹಾಗೂ ಭರವಸೆ ಮೂಡಿಸುವ ದೃಷ್ಟಿಯಿಂದ ಮತ್ತು ಸಮಾಜಘಾತಕ, ಕಿಡಿಗೇಡಿಗಳಲ್ಲಿ ಭಯ ಹುಟ್ಟಿಸುವ ದೃಷ್ಟಿಯಿಂದ ಪೊಲೀಸ್ ಪಥ ಸಂಚಲನ ಆಯೋಜಿಸಲಾಗಿತ್ತು.

ಕುಂದಾಪುರ ಡಿವೈಎಸ್‍ಪಿ ಶ್ರೀಕಾಂತ ಮಾರ್ಗದರ್ಶನದಲ್ಲಿ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್ ಮತ್ತು ಕುಂದಾಪುರ ಪೊಲೀಸ್ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ಉಪನಿರೀಕ್ಷಕರು, ಹಾಗೂ ಪೊಲೀಸ್ ಸಿಬ್ಬಂದಿಗಳು, ಮೀಸಲು ಪೊಲೀಸ್ ಪಡೆಯ ಸಿಬ್ಬಂಗಳು ಪಥ ಸಂಚಲನ ನಡೆಸಿದರು. ಗಂಗೊಳ್ಳಿಯ ಶ್ರೀ ರಾಮ ಮಂದಿರದ ಬಳಿಯಿಂದ ಮೀನು ಮಾರುಕಟ್ಟೆ ಮಾರ್ಗವಾಗಿ ಮುಖ್ಯರಸ್ತೆ ಮೂಲಕ ಸಾಗಿ ಬಂದ ಪೊಲೀಸ್ ಪಥ ಸಂಚಲನ ಬಂದರು ವರೆಗೆ ಸಾಗಿ ಸಮಾಪನಗೊಂಡಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

error: Content is protected !!