ಬೆಳ್ತಂಗಡಿ : ಸವಣಾಲು ಗ್ರಾಮದ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ ಕಾಳಿಬೆಟ್ಟದಲ್ಲಿ ಫೆಬ್ರವರಿ 14 ರಿಂದ 16ರ ವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ಜರುಗಲಿದೆ.
ಈ ದಿನಗಳಲ್ಲಿ ವೈದಿಕ ಕಾರ್ಯಕ್ರಮಗಳು ವಿಧಿವತ್ತಾಗಿ ಜರಗಲಿರುವುದು ಹಾಗೂ ಅನ್ನಸಂತರ್ಪಣೆ ಕೂಡ ಜರಗಲಿರುವುದು. ಆ ಪ್ರಯುಕ್ತ ತಾವೆಲ್ಲರೂ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವಿಯ ದರ್ಶನಗೈದು, ಪ್ರಸಾದವನ್ನು ಸ್ವೀಕರಿಸಿ, ಶ್ರೀ ದುರ್ಗಾಕಾಳಿಕಾಂಬ ದೇವಿಯ ದಿವ್ಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಶ್ರೀ ಕ್ಷೇತ್ರದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಭಕ್ತ ಜನರ ಅವಗಾಹನೆಗೆ:
i)ದಿ 14/02/2022,ಸೋಮವಾರ ದಂದು ಬೆಳಗ್ಗೆ 09:00 ಗಂ.ಯಿಂದ ಹಸಿರುವಾಣಿ ಹೊರೆಕಾಣಿಕೆ ಯನ್ನು ಸ್ವೀಕರಿಸಲಾಗುವುದು.
ii) ಹೆಚ್ಚಿನ ವಿವರಗಳಿಗೆ ಶ್ರೀ ಕ್ಷೇತ್ರದ ಕಛೇರಿಯನ್ನು ಸಂಪರ್ಕಿಸಬಹುದು.
iii ) ಶ್ರೀ ಕ್ಷೇತ್ರದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಕೋವಿಡ್-19ರ ಮಾರ್ಗಸೂಚಿಯ ಪ್ರಕಾರ ನಡೆಯಲಿದೆ.
Advertisement. Scroll to continue reading.