Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ಹುಟ್ಟೂರ ಸನ್ಮಾನ

3

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ವಿದೇಶದಲ್ಲಿ ಉದ್ಯಮ ಸ್ಥಾಪಿಸಿ ಇಲ್ಲಿನ ಯುವಕರಿಗೆ ಉದ್ಯೋಗ ಕೊಟ್ಟು ಕರಾವಳಿಯ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸಿದ ವಕ್ವಾಡಿ ಪ್ರವೀಣ್‌ ಕುಮಾರ್ ಶೆಟ್ಟಿ ಕೇವಲ ಉದ್ಯಮಿ ಎನಿಸಿಕೊಳ್ಳದೇ ಸಮಾಜಮುಖಿ ಕಾರ್ಯದಲ್ಲಿಯೂ ಮುಂಚೂಣಿಯಲ್ಲಿರುವವರು. ಇವರ ಸಮಾಜಮುಖಿ ಕಾರ್ಯ ಗುರುತಿಸಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟು ಪುರಸ್ಕರಿಸಿರುವುದು ನಮ್ಮೂರಿಗೆ ಹೆಮ್ಮೆಯ ವಿಚಾರ. ಆ ನಿಟ್ಟಿನಲ್ಲಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ಹುಟ್ಟೂರ ಸನ್ಮಾನ ಸಮಿತಿ ವತಿಯಿಂದ ಫೆಬ್ರವರಿ 27 ರಂದು ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದೇವೆ ಎಂದು ಸಮಿತಿ ಅಧ್ಯಕ್ಷರಾದ ಬಿ. ಅಪ್ಪಣ್ಣ ಹೆಗ್ಡೆ ತಿಳಿಸಿದರು.

ಅವರು ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಶುಕ್ರವಾರ ವಕ್ವಾಡಿಯ ಫಾರ್ಚೂನ್ ವಿಲೇಜ್ ಹೊಟೇಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಮಾರಂಭದ ಕುರಿತು ಮಾಹಿತಿ ನೀಡಿದರು.

Advertisement. Scroll to continue reading.

ವಕ್ವಾಡಿಯ ಫಾರ್ಚೂನ್ ವಿಲೇಜ್ ಹೊಟೇಲ್‌ ಸಮೀಪದ ಮೈದಾನದಲ್ಲಿ ಫೆಬ್ರವರಿ 27 ರ ಭಾನುವಾರ 9 ಘಂಟೆಗೆ ಉಡುಪಿಯ ಪ್ರಸಾದ್ ನೇತ್ರಾಲಯ ವೈದ್ಯರಿಂದ ಉಚಿತ ಕಣ್ಣಿನ ತಪಾಸಣೆ ನಡೆಯಲಿದ್ದು, ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ವೈದ್ಯರಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ‌ ಶ್ರೀನಿವಾಸ ಶೆಟ್ಟಿ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಲಿದ್ದು, ಕಾಳಾವರ ಗ್ರಾ.ಪಂ ಅಧ್ಯಕ್ಷೆ ಆಶಾಲತಾ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮಧ್ಯಾಹ್ನ 1 ಗಂಟೆಯಿಂದ 2 ರ ತನಕ ಸಹಭೋಜನ ವ್ಯವಸ್ಥೆ ಕಲ್ಪಿಸಲಾಗಿದ್ದು, ಬಳಿಕ ಆಹ್ವಾನಿತ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ವಿಜೇತ ತಂಡಕ್ಕೆ‌ ಪಾರಿತೋಷಕ ಹಾಗೂ ನಗದು ಬಹುಮಾನ ನೀಡಲಾಗುವುದು.

ಸಂಜೆ 5 ಗಂಟೆಗೆ ಅಭಿನಂದನಾ ಸಮಾರಂಭ ನಡೆಯಲಿದ್ದು, ಸುಬ್ರಹ್ಮಣ್ಯ ಮಠಾಧೀಶರಾದ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನಾ ನೀಡಲಿದ್ದಾರೆ. ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿಯ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಸಚಿವ ಸುನಿಲ್‌ ಕುಮಾರ್ ಪ್ರಸಾದ್ ನೇತ್ರಾಲಯಕ್ಕೆ ಆಂಬುಲೆನ್ಸ್ ಹಸ್ತಾಂತರಿಸಲಿದ್ದಾರೆ. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದು, ಉಸ್ತುವಾರಿ ಸಚಿವ ಎಸ್ ಅಂಗಾರ ಅಶಕ್ತರಿಗೆ ಆರ್ಥಿಕ ಧನ ಸಹಾಯ ಮಾಡಲಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಹುಮಾನ ವಿತರಣೆ ನೆರವೇರಿಸಲಿದ್ದು, ಮಂಗಳೂರಿನ ರಾಮಕೃಷ್ಣ ಡಿಗ್ರಿ ಕಾಲೇಜಿನ ಪ್ರಾಂಶುಪಾಲ ಎಮ್ ಬಾಲಕೃಷ್ಣ ಶೆಟ್ಟಿ ಅಭಿನಂದನಾ ಭಾಷಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಬಿ ವೈ ರಾಘವೇಂದ್ರ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಯುಟಿ ಖಾದರ್, ರಘುಪತಿ ಭಟ್, ಬಿ.ಎಂ ಸುಕುಮಾರ್ ಶೆಟ್ಟಿ, ವೈ ಭರತ್ ಶೆಟ್ಟಿ, ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಸಂಪಾದಕ ವಿಶ್ವೇಶ್ವರ ಭಟ್, ಡಾ. ಮೋಹನ್ ಆಳ್ವ, ಅಣ್ಣಾಮಲೈ, ರೆಡಿಷನ್ ಬ್ಲೂ ಹೊಟೇಲ್ ನ ಕೆ ನಾಗರಾಜ್, ಕನ್ನಡಿಗಾಸ್ ಯುಎಇ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಮಾಜಿ ಪರಿಷತ್ ಸದಸ್ಯ ಎಂ ಶ್ರೀನಿವಾಸ, ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಮ್.ಆರ್.ಜಿ ಗ್ರೂಪ್‌ನ ಕೆ ಪ್ರಕಾಶ್ ಶೆಟ್ಟಿ, ಪಟ್ಲ ಫೌಂಡೇಶನ್ ನ ಪಟ್ಲ ಸತೀಶ್ ಶೆಟ್ಟಿ ಉಪಸ್ಥಿರಿರಲಿದ್ದಾರೆ.

ರಾತ್ರಿ 8:30 ರಿಂದ ಆಳ್ವಾಸ್ ಪ್ರತಿಷ್ಠಾನ ಮೂಡುಬಿದಿರೆ ಇಲ್ಲಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ವೈಭವ ನಡೆಯಲಿದ್ದು, ಸನ್ಮಾನ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಕನ್ನಡದ ಖ್ಯಾತ ಚಲನ ಚಿತ್ರ‌ನಟರು ಭಾಗವಹಿಸಲಿದ್ದಾರೆ. ಆ ಬಳಿಕ ಸಾಮೂಹಿಕ ಭೋಕನದ ವ್ಯವಸ್ಥೆ ಇರುತ್ತದೆ ಎಂದು ಮಾಹಿತಿ ನೀಡಿದರು.

Advertisement. Scroll to continue reading.

ಗೋಷ್ಠಿಯಲ್ಲಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಸಮಿತಿ ಕಾರ್ಯದರ್ಶಿ ವೇಣುಗೋಪಾಲ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷ ಡಾ. ಸುಧಾಕರ ನಂಬಿಯಾರ್ ಇದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!