Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಎಸ್‌ ಆರ್‌ ಸಮೂಹ ಶಿಕ್ಷಣ ಸಂಸ್ಥೆಗೆ ಮಂತ್ರಾಲಯದ ಸ್ವಾಮೀಜಿ ಭೇಟಿ

3

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಕಲಿಯುಗದ ಕಾಮಧೇನು ಮಹಾಗುರು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ೨೫ ವರ್ಷಗಳ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಸಾವಿರ ಸಾವಿರ ಸಂಖ್ಯೆಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಸುಸಜ್ಜಿತ ವ್ಯವಸ್ಥೆಯಲ್ಲಿ ನೀಡುತ್ತಿರುವ

ಹೆಬ್ರಿ ಎಸ್‌ ಆರ್‌ ಸಮೂಹ ಶಿಕ್ಷಣ ಸಂಸ್ಥೆ ಆದರ್ಶ ಶಿಕ್ಷಣ ಸಂಸ್ಥೆ ಎಂದು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದರು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement. Scroll to continue reading.

ಅವರು ಶನಿವಾರ ಹೆಬ್ರಿಯ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಗೆ ಬೇಟಿ ನೀಡಿ ಪಟ್ಟದ ದೇವರ ಪೂಜೆ ಸಲ್ಲಿಸಿ ಆಶೀರ್ವಚನ ನೀಡಿದರು.

ಅಭಿವೃದ್ಧಿಯ ಮೂಲಕ ಉನ್ನತ ಸ್ಥಾನದಲ್ಲಿರುವ ಸಂಸ್ಥೆಯು ನಮ್ಮ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿರುವುದು ನಮಗೆ ಖುಷಿ ನೀಡಿದೆ, ರಾಘವೇಂದ್ರ ಸ್ವಾಮೀಗಳ ಪ್ರೇರಣೆಯಿಂದ ಹೆಬ್ರಿಯ ಎಸ್‌ ಆರ್‌ ಸಂಸ್ಥೆಗೆ ಬರುವಂತಾಯಿತು ಇನ್ನೊಮ್ಮೆ ಆಗಮಿಸಿ ದೇವರ ಪೂಜೆಯನ್ನು ಸಂಸ್ಥೆಯಲ್ಲೇ ಮಾಡುವುದಾಗಿ ಸ್ವಾಮೀಜಿ ಹೇಳಿದರು.

ಯಾವದೇ ಕೊರೆತೆಯಿಲ್ಲದಂತೆ ವ್ಯವಸ್ಥಿತವಾದ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು, ಆಡಳಿತ ವರ್ಗಕ್ಕೆ ಒಳ್ಳೇಯದಾಗಲಿ, ಯಾವೂದಕ್ಕೂ ಮಣಿಯದೆ ಇನ್ನಷ್ಟು ಆದರ್ಶವಾಗಿ ಶಿಕ್ಷಣ ಸಂಸ್ಥೆಯನ್ನು ಬೆಳೆಸಿ ಮುನ್ನಡೆಸಿ ಎಂದು ಸ್ವಾಮೀಜಿ ಹಾರೈಸಿದರು.

ಸ್ವಾಮೀಜಿ ಆಗಮನದಿಂದ ಭಾವುಕರಾದ ಹೆಬ್ರಿ ಎಸ್‌ ಆರ್‌ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.‌ ನಾಗರಾಜ ಶೆಟ್ಟಿ ಮತ್ತು ಕಾರ್ಯದರ್ಶಿ ಸಪ್ನಾ ಎನ್‌ ಶೆಟ್ಟಿ ದಂಪತಿಗಳು ಪಾದಪೂಜೆ ನೆರವೇರಿಸಿ ಭಕ್ತಿ ನಮನ ಸಲ್ಲಿಸಿದರು. ಸಮಾಜ ಸೇವಕ ಬೈಕಾಡಿ ಮಂಜುನಾಥ ರಾವ್‌ ಶಿವಪುರ, ಸ್ಥಳೀಯ ಗಣ್ಯರು, ಸಂಘಸಂಸ್ಥೆಗಳ ಪ್ರಮುಖರು, ಹೆಬ್ರಿ ಎಸ್‌ ಆರ್‌ ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಪ್ರಶಾಂತ್‌ ಕುಮಾರ್‌, ಉಪನ್ಯಾಸಕರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!