Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ; ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

1

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಸಾಧನೆಯ ಛಾಪು ಮೂಡಿಸಿದ್ದಾಳೆ. ಸ್ವ ಸಹಾಯ ಗುಂಪುಗಳ ಮೂಲಕ ಮಹಿಳೆಯರು ಸಬಲೀಕರಣಗೊಳ್ಳುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ರಾಷ್ಟ್ರೀಯ ಜೀವನೋಪಾಯ ಮಿಷನ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಮತ್ತು ತಾಲೂಕು ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟ, ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ, ಎನ್.ಯು.ಎಲ್.ಎಮ್ ಹಾಗೂ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
    
 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಉಡುಪಿ ಜಿಲ್ಲಾ ಪಂಚಾಯತ್‌ನ ವಿವಿಧ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ನೀಡುತ್ತಿದ್ದು, ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವ-ಸಹಾಯ ಸಂಘಕ್ಕೆ ಕೃಷಿ ಯಂತ್ರೋಪಕರಣ ವಿತರಣೆ, ಚಿಕ್ಕಿ ಘಟಕ ಸ್ಥಾಪನೆ, ಸಂಚಾರಿ ಕ್ಯಾಂಟೀನ್ ಆರಂಭಕ್ಕೆ ಆರ್ಥಿಕ ನೆರವು, ಮುಂತಾದವುಗಳನ್ನು ನೀಡಲಾಗುತ್ತಿದೆ. ಮಹಿಳೆಯರು ಸಬಲರಾಗಿ, ಸಂಘಟಿತರಾಗಿ, ಜಾಗೃತರಾಗಬೇಕು. ನಾಗರೀಕ ಸೇವೆಗಳಲ್ಲಿ ಜಿಲ್ಲೆಯ ಸ್ವಸಹಾಯ ಸಂಘದ ಮಹಿಳೆಯರು ಸೇರ್ಪಡೆಯಾಗುವ ಬಗ್ಗೆ ತಮ್ಮ ಹೆಣ್ಣು ಮಕ್ಕಳಿಗೆ ಈಗಿನಿಂದಲೇ ಪ್ರೇರೇಪಣೆ ನೀಡಬೇಕು ಎಂದರು.

Advertisement. Scroll to continue reading.

ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದರು.


   ಸಂಜೀವಿನಿ ಯೋಜನೆಯ ಕುರಿತು ಉಡುಪಿ ಜಿಲ್ಲಾ ಲಾಂಛನ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಎಸ್.ಡಿ.ಎಂ. ಆರ್ಯುವೇದ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ನವೀನ್ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸಂಜೀವಿನಿ ಗುಂಪಿನ ಮಹಿಳೆಯರಿಗೆ ಚಾಲನಾ ಪರವಾನಗಿ ವಿತರಣೆ, ಮಹಿಳಾ ಸ್ವ-ಸಹಾಯ ಸಂಘಕ್ಕೆ ಟ್ಯಾಕ್ಟರ್ ವಿತರಣೆ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಂಜೀವಿನಿ ಒಕ್ಕೂಟದ ಎಂ .ಬಿ .ಕೆ ಮತ್ತು ಎಲ್ .ಸಿ .ಆರ್ .ಪಿ ಮಹಿಳೆಯರನ್ನು ಗೌರವಿಸಲಾಯಿತು.

ಅಸಾಧಾರಣ ಪ್ರತಿಭಾ ಪ್ರಶಸ್ತಿ ಪಡೆದ ಮಕ್ಕಳಿಗೆ ಸನ್ಮಾನ, ಅತ್ಯುತ್ತಮ ಮಹಿಳಾ ಮಂಡಲಕ್ಕೆ ಸನ್ಮಾನಿಸಲಾಯಿತು. ಸ್ವ-ಸಹಾಯ ಸಂಘಗಳ ಉತ್ಪನ್ನಗಳ ಮಾರಾಟ ಮಳಿಗೆಗಳ ಉದ್ಘಾಟನೆ ನಡೆಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ  ಬಾಬು, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಜಗದೀಶ್, ರುಡ್‌ಸೆಟ್ ನಿರ್ದೇಶಕ ಪಾಪಾ ನಾಯ್ಕ್, ಶೀಲಾ ಕೆ ಶೆಟ್ಟಿ, ಯಶೋಧಾ ಶೆಟ್ಟಿ, ರಾಧಾದಾಸ್, ಶೋಭಾ ಕಲ್ಕೂರಾ, ವಾಸಂತಿ ಅಂಬಲಪಾಡಿ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವಾ .ಏನ್ .ಆರ್ .ಎಲ್ .ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೀತಾ ವಂದಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!