Connect with us

Hi, what are you looking for?

Diksoochi News

ರಾಷ್ಟ್ರೀಯ

ಜೂನ್ 30 ರಿಂದ ಅಮರನಾಥ ಯಾತ್ರೆ ಆರಂಭ

3

ನವದೆಹಲಿ: ಈ ವರ್ಷದ ಅಮರನಾಥ ಯಾತ್ರೆಯು ಜೂನ್ 30 ರಿಂದ ಆರಂಭಗೊಳ್ಳಲಿದೆ. ಕೊರೋನದ ಎಲ್ಲಾ ಮುಂಜಾಗೃತಾ ಕ್ರಮಗಳೊಂದಿಗೆ ಯಾತ್ರೆ ಶುರುವಾಗಲಿದೆ ಎಂದು ಹೇಳಲಾಗಿದೆ. ಎಲ್‌ಜಿ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಅಮರನಾಥಜಿ ದೇಗುಲ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಕರೋನಾ ಸೋಂಕಿನಿಂದಾಗಿ ಕಳೆದ 2 ವರ್ಷಗಳಿಂದ ಅಮರನಾಥ ಯಾತ್ರೆಯನ್ನು ಮುಂದೂಡಲಾಗಿತ್ತು. 2019 ರ ಆಗಸ್ಟ್ ತಿಂಗಳಲ್ಲಿ, 370 ನೇ ವಿಧಿಯನ್ನು ರದ್ದುಗೊಳಿಸಿದ್ದರಿಂದ, ಅಮರನಾಥ ಯಾತ್ರೆಯನ್ನು ಮಧ್ಯದಲ್ಲಿಯೇ ರದ್ದುಗೊಳಿಸಲಾಗಿತ್ತು.

ಸಭೆಯ ನಂತರ ಮನೋಜ್ ಸಿನ್ಹಾ ಟ್ವೀಟ್ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಟ್ವೀಟ್ ನಲ್ಲಿ, ಇಂದು ಶ್ರೀ ಅಮರನಾಥಜಿ ಶ್ರೈನ್ ಬೋರ್ಡ್‌ನ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. 43 ದಿನಗಳ ಪವಿತ್ರ ಯಾತ್ರೆಯು ಎಲ್ಲಾ ಕೋವಿಡ್ ಪ್ರೋಟೋಕಾಲ್‌ಗಳೊಂದಿಗೆ ಜೂನ್ 30 ರಂದು ಪ್ರಾರಂಭವಾಗುತ್ತದೆ ಮತ್ತು ಸಂಪ್ರದಾಯದ ಪ್ರಕಾರ ರಕ್ಷಾ ಬಂಧನದ ದಿನದಂದು ಕೊನೆಗೊಳ್ಳುತ್ತದೆ. ಮುಂಬರುವ ಭೇಟಿಯಲ್ಲೂ ನಾವು ವಿವಿಧ ವಿಷಯಗಳ ಬಗ್ಗೆ ಆಳವಾದ ಚರ್ಚೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!