Connect with us

Hi, what are you looking for?

Diksoochi News

ರಾಷ್ಟ್ರೀಯ

ಕೆಲಸದಿಂದ ವಜಾ ಮಾಡಿದಕ್ಕಾಗಿ ಯಾಜಮಾನಿಗೆ ಬೆಂಕಿ ಹಚ್ಚಿದ ನೌಕರ; ಆತನನ್ನೂ ಬೆಂಕಿಗೆಳೆದುಕೊಂಡು ಸತ್ತ ಮಹಿಳೆ

2

ಪುಣೆ : ಕೆಲಸದಿಂದ ವಜಾ ಮಾಡಿದ ಕಾರಣಕ್ಕಾಗಿ ನೌಕರನೋರ್ವ ಯಜಮಾನಿಗೆ ಬೆಂಕಿಹಚ್ಚಿದ್ದು, ಆಕೆ ಆತನನ್ನೂ ಬೆಂಕಿಯಲ್ಲಿ ಎಳೆದುಕೊಂಡಿದ್ದರಿಂದ ಇಬ್ಬರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಬಾಳ ನೋಯ ಜರ್ನಿ (32) ಮೃತ ಮಹಿಳೆ. ಮಿಲಿಂದ್ ಗೋವಿಂದರಾವ್ ನಾಥಸಾಗರ್ ಮೃತ ನೌಕರ.

ಮೃತ ಮಹಿಳೆ ವಡಗಾಂವ್ ಶೇರಿಯ ಸೋಮನಾಥ ನಗರದಲ್ಲಿ ಹೊಲಿಗೆ ಅಂಗಡಿ ನಡೆಸುತ್ತಿದ್ದಳು. ಕೆಲ ದಿನಗಳ ಹಿಂದೆ ಮನೆಗೆಲಸದಿಂದ ನೌಕರನನ್ನು ವಜಾ ಮಾಡಿದ್ದಳು. ಇದರಿಂದ ಕೋಪಗೊಂಡ ನೌಕರ, ಮಹಿಳೆ ಮೇಲೆ ಸೋಮವಾರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆ ವೇಳೆ ಮಹಿಳೆ ಪಕ್ಕದಲ್ಲಿದ್ದ ನೌಕರನನ್ನು ಎಳೆದುಕೊಂಡಿದ್ದಾಳೆ.

Advertisement. Scroll to continue reading.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಾಳುಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬೆಂಕಿ ಹಚ್ಚಿದ್ದ ನೌಕರ ಅದೇ ದಿನ ಸಾವನ್ನಪ್ಪಿದ್ದು, ಮಹಿಳೆ ಮರುದಿನ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ. ಇಬ್ಬರ ಜಗಳವನ್ನು ಬಿಡಿಸಲು ಬಂದಿದ್ದ ಪಕ್ಕದ ಮೊಬೈಲ್ ಅಂಗಡಿಯ ವ್ಯಕ್ತಿಗೆ ಶೇಕಡ 35ರಷ್ಟು ಸುಟ್ಟಗಾಯಗಳಾಗಿವೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಂದನನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!