Connect with us

Hi, what are you looking for?

Diksoochi News

ಸಾಹಿತ್ಯ

ಹಾವಂಜೆ ಹರಿಹರ ಸನ್ನಿಧಿಯಲ್ಲಿ ಸುಡು ಬೇಸಿಗೆಯಲ್ಲೂ ಬತ್ತದ ಕೆರೆ!

1

ಲೇಖಕ : ಗಣೇಶ್ ರಾಜ್ ಸರಳೇಬೆಟ್ಟು

ಉಡುಪಿ : ಹಾವಂಜೆ ಗ್ರಾಮದ ಕೀಳಂಜೆಯ ಹರಿಹರ ಸನ್ನಿಧಿಯಾದ ಶ್ರೀ ಮಹಾವಿಷ್ಣು ಮಾಲಿಂಗೇಶ್ವರ ದೇವಸ್ಥಾನದ ಕೆರೆಯು ವರ್ಷದ 365 ದಿನವೂ ನೀರು ತುಂಬಿ ತುಳುಕುತ್ತಿರುತ್ತದೆ. ಸಾಕ್ಷಾತ್ಕಾರ ಗಂಗೆಯೆ ಇಳಿದು ಬಂದಂತೆ ನಿತ್ಯವೂ, ಕೆರೆ (ಪುಷ್ಕರಣಿ) ತುಂಬಿ ತುಳುಕುತ್ತದೆ. ಈ ನೀರು ನಂತರ ಮುಂದೆ ಸಾಗಿ ಕೀಳಂಜೆಯ ಗದ್ದೆಯ ಪರಿಸರದಲ್ಲಿ ಇಂಗಿಹೋಗುತ್ತದೆ. ಆದರೂ ಕೆಲ ಹತ್ತಿರ ಪ್ರದೇಶದಲ್ಲಿರುವ ಬಾವಿಗಳಲ್ಲಿ ನೀರು ಕಡಿಮೆ ಇರುತ್ತದೆ ಹಾಗೂ ಮೇ ತಿಂಗಳಲ್ಲಿ ನೀರು ಬತ್ತಿ ಹೋಗುತ್ತದೆ. ಆದರೂ ಈ ದೇವಸ್ಥಾನವೂ ಪ್ರಕೃತಿಯ ಮಡಿಲಲ್ಲಿದ್ದು, ಎತ್ತರವಾದ ಪ್ರದೇಶದಲ್ಲಿ ಹರಿಹರ ಸನ್ನಿಧಿ ಇದ್ದರೂ ಕೂಡ ನೀರು ಬತ್ತದೆ ಇರುವುದು, ಪವಾಡವೇ ಅನ್ನಬಹುದು. ದೇವಸ್ಥಾನದ ಹಿಂಬದಿ ಅತಿ ಹೆಚ್ಚು ನೀರು ಹೀರುವ ಅಕೇಶಿಯ ಮರವನ್ನು ಸಾಲುಸಾಲಾಗಿ ಯಥೇಚ್ಛವಾಗಿ ಅರಣ್ಯ ಇಲಾಖೆ ಬೆಟ್ಟದಲ್ಲಿ ಬೆಳೆಸಿದ್ದಾರೆ.

ಇತ್ತೀಚೆಗೆ ದೇವಸ್ಥಾನಕ್ಕೆ ಹೋಗಲು ನೂತನ ರಸ್ತೆಯಾಗಿದ್ದು, ಪ್ರಕೃತಿ ಮಡಿಲಲ್ಲಿರುವ ಈ ದೇವಸ್ಥಾನವನ್ನು ಕಣ್ತುಂಬ ನೋಡಬಹುದು. ಈ ದೇವಸ್ಥಾನಕ್ಕೆ ಮಣಿಪಾಲ ಶ್ರೀಂಬ್ರ ಹೊಸ ಸೇತುವೆ ಮೂಲಕವೂ ಬರಬಹುದು. ಕೊಳಲಗಿರಿ ಹಾವಂಜೆ ಕೀಳಂಜೆಯ ಮೂಲಕವೂ ಹರಿಹರ ಸನ್ನಿಧಿಯನ್ನು ಸಂಪರ್ಕಿಸಲು ಮೂರು ಕೋಟಿ 40 ಲಕ್ಷ ನೂತನ ರಿಂಗ್ ರಸ್ತೆ ರಚನೆಯಾಗಿದ್ದು, ಈ ರಸ್ತೆಯಲ್ಲಿ ಸಂಚರಿಸಿ ಈ ದೇವಸ್ಥಾನವನ್ನು ನೋಡಬಹುದು.. ಒಟ್ಟಿನಲ್ಲಿ 365 ದಿನವೂ ನಿತ್ಯ ನೀರು ಹರಿಯುವುದು ಪ್ರಕೃತಿ ಪ್ರಿಯರಲ್ಲಿ ಸಂತಸ ಮೂಡಿದೆ,

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!