ರಾಯಚೂರು: ರಸ್ತೆಯಲ್ಲಿ ಅಡ್ಡ ಬಂದಂತ ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಉರುಳಿ ಬಿದ್ದು, ಹಲವರು ಗಾಯಗೊಂಡಿರುವ ಘಟನೆ ರಾಯಚೂರು-ತೆಲಂಗಾಣ ಗಡಿ ಭಾಗ ಕೃಷ್ಣಾ ಸೇತುವೆ ಬಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಹೈದ್ರಾಬಾದ್ ಗೆ ತೆರಳುತ್ತಿದ್ದಂತ ಖಾಸಗಿ ಬಸ್ ಚಾಲಕ ರಸ್ತೆಯಲ್ಲಿ ಅಡ್ಡಬಂದಂತ ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದ್ದಾನೆ. ಆದರೆ, ಚಾಲಕನ ನಿಯಂತ್ರಣ ತಪ್ಪಿದ ಕಾರಣ ಅದು ಸಾಧ್ಯವಾಗದೆ, ಎಮ್ಮೆ ಸ್ಥಳದಲ್ಲೇ ಸಾವನ್ನಪ್ಪಿದೆ. ಅತ್ತ ಬಸ್ ಕೂಡ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಪರಿಣಾಮ, ಬಸ್ ನಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
Advertisement. Scroll to continue reading.