Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಕೆನಡಾ ಸಂಸತ್ತಿನಲ್ಲಿ ಕನ್ನಡ ಕಲರವ; ಕನ್ನಡ ಪ್ರೇಮ ಮೆರೆದ ಸಂಸದ ಚಂದ್ರ ಆರ್ಯ

1

ಬೆಂಗಳೂರು: ಕೆನಡಾ ಸಂಸತ್ತಿನಲ್ಲಿ, ಕನ್ನಡಿಗ ಸಂಸದ ಚಂದ್ರ ಆರ್ಯ ಕನ್ನಡ ಪ್ರೇಮವನ್ನು ತೋರಿದ್ದಾರೆ. ಸಂಸತ್ ನಲ್ಲಿ ಕನ್ನಡದಲ್ಲಿಯೇ ಮಾತನಾಡಿ ಕನ್ನಡ ಕಂಪನ್ನು ಹಬ್ಬಿದ್ದಾರೆ. ಈ ಕುರಿತ ವೀಡಿಯೋ ವೈರಲ್ ಆಗಿದೆ.

ಮಾನ್ಯ ಸಭಾಪತಿ,

ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತದ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಸಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು ಐದು ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ. ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಮತ್ತು ನಟಸಾರ್ವಭೌಮ ಡಾ. ರಾಜಕುಮಾರ್ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತೀದ್ದೇನೆ.

Advertisement. Scroll to continue reading.

ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು..
ಧನ್ಯವಾದಗಳು ಸಭಾಪತಿ ಎಂದು ತಮ್ಮ ಮಾತು ಮುಗಿಸಿದ್ದಾರೆ. ಚಂದ್ರ ಆರ್ಯ ಕನ್ನಡ ಪ್ರೇಮಕ್ಕೆ ಇದೀಗ ನಾಡಿನೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!