Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ: ಶಿಕ್ಷಕ ಭೋಜ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿ ನಕ್ಸಲ್ ಬಿ.ಜಿ.ಕೃಷ್ಣಮೂರ್ತಿಯನ್ನು ಸೀತಾನದಿಗೆ ಕರೆತಂದ ಪೊಲೀಸರು; ಸ್ಥಳ ಪರಿಶೀಲನೆ

1

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ ; ಶಿಕ್ಷಕ ಸೀತಾನದಿ ಭೋಜ ಶೆಟ್ಟಿ ಮತ್ತು ಅವರ ಸಂಬಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಕ್ಸಲ್ ನಾಯಕ ಬಿಜಿ ಕೃಷ್ಣಮೂರ್ತಿ ಯನ್ನು ಮಂಗಳವಾರ ಚಿಕ್ಕಮಗಳೂರಿನಿಂದ ಸಿಒಡಿ ಪೊಲೀಸರು ಬಿಗು ಪೊಲೀಸ್ ಬಂದೋಬಸ್ತಿನಲ್ಲಿ ಸೀತಾನದಿ ಕರೆತಂದು ಹತ್ಯೆ ನಡೆದ ಸ್ಥಳ ಮಹಜರು ನಡೆಸಿದರು.


2008ರ ಇಸವಿಯಲ್ಲಿ ರಾತ್ರಿ 8.30 ರ ಹೊತ್ತಿಗೆ ಶಿಕ್ಷಕ ಭೋಜ ಶೆಟ್ಟಿ ಅವರ ಸಂಬಂಧಿಕ ಸುರೇಶ್ ಶೆಟ್ಟಿ ಅವರು ಬೈಕ್ ನಲ್ಲಿ ಮನೆಗೆ ಹೋಗುವಾಗ ಶಿಕ್ಷಕ ಭೋಜ ಶೆಟ್ಟಿ ಅವರ ಮನೆಯ ಗೇಟ್ ಬಳಿ ನಕ್ಸಲರು ದಟ್ಟ ಕಾಡಿನ ನಡುವೆ ಹಿಂದಿನಿಂದ ಬಂದೂಕಿನಿಂದ ಗುಂಡು ಹಾರಿಸಿ ಇಬ್ಬರನ್ನು ಹತ್ಯೆ ಮಾಡಿದ್ದರು. ಈ ಕೃತ್ಯದ ರೂವಾರಿ ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಎಂದು ಶಂಕಿಸಲಾಗಿದೆ.

ಈತನ ಮತ್ತು ತಂಡದ ಕೆಲವು ಸದಸ್ಯರ ಮೇಲೆ ಕೇಸು ದಾಖಲಾಗಿ, ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ತನಿಖೆಯ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬಿ.ಜಿ.ಕೃಷ್ಣಮೂರ್ತಿ ಈತನನ್ನು ಚಿಕ್ಕಮಗಳೂರು ಜೈಲಿನಿಂದ ಸಿಒಡಿ ತನಿಖಾಧಿಕಾರಿ ಡಿ.ವೈ.ಎಸ್ .ಪಿ ..ಡಿ. ಪಿ ಪ್ರಸಾದ್ ಮತ್ತು ಅವರ ತಂಡ ಸೀತಾನದಿಗೆ ಆಗಮಿಸಿ ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಿ ತನಿಖೆ ನಡೆಸಿದರು.

ಎನ್. ಎಫ್ ಪೊಲೀಸ್ ನಿರೀಕ್ಷಕ ಸತೀಶ್ , ಪೊಲೀಸ್ ಅಧಿಕಾರಿಗಳಾದ ಹೆಬ್ರಿ ಎಸ್ಸೈ ಸುದರ್ಶನ್ ದೊಡ್ಮನಿ ANF, ಪಿಎಸ್ ಐ ವಸಂತ್ ಹಾಗೂ ಪೊಲೀಸ್ ಮತ್ತು ಎಎನ್ ಎಫ್ ಸಿಬ್ಬಂದಿಗಳು ಹಾಜರಿದ್ದರು.

Advertisement. Scroll to continue reading.

ಹತ್ಯೆಗೀಡಾದ ಶಿಕ್ಷಕ ಭೋಜ ಶೆಟ್ಟಿ ಅವರ ಪುತ್ರ ಸೀತಾನದಿ ವಿಜಯ ಶೆಟ್ಟಿ ಘಟನೆಯ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದರು ಮತ್ತು ತಪ್ಪಿತಸ್ಥ ಆರೋಪಿಗಳಿಗೆ ಸರಿಯಾದ ಶಿಕ್ಷೆ ಆಗಬೇಕು ತನಿಖೆಯನ್ನು ಆದಷ್ಟು ಬೇಗ ಮುಕ್ತಾಯಗೊಳಿಸಿ ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದರು.

ಭೋಜ ಶೆಟ್ಟಿ ಹತ್ಯೆಗೆ ಸಂಬಂಧಿಸಿದ ಈ ಹಿಂದೆ ಬಂಧಿತನಾಗಿದ್ದ ನಕ್ಸಲ್ ವೀರಮಣಿಯ ಹೇಳಿಕೆಯಂತೆ ಭೋಜ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ ಈದು ಸಮೀಪ ಕನ್ಯಾಲಿನಲ್ಲಿ ಬೆಳಗ್ಗೆ ಮಹಜರು ನಡೆಸಲಾಯಿತು.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!