Connect with us

Hi, what are you looking for?

Diksoochi News

ಕರಾವಳಿ

ಮಳಲಿ ಮಸೀದಿಯ ಸ್ಥಳದಲ್ಲಿ ದೈವೀ ಶಕ್ತಿ ಇದೆ : ತಾಂಬೂಲ ಪ್ರಶ್ನೆ ವೇಳೆ ಮಾಹಿತಿ

0

ಮಂಗಳೂರು : ಮಂಗಳೂರಿನ ಮಳಲಿ ಬಳಿ ಮಸೀದಿ ನವೀಕರಣ ವೇಳೆ ದೇವಸ್ಥಾನ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ವಿಶ್ವ ಹಿಂದೂ ಪರಿಷತ್ ಇಂದು ತಾಂಬೂಲ ಪ್ರಶ್ನೆಗೆ ನಡೆಸಿದೆ.

ಇಂದು ಮಳಲಿ ಮಸೀದಿಯ ಸಮೀಪದ ರಾಮಾಂಜನೇಯ ಭಜನೆ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಹಾಕಲಾಗಿದೆ.

ಈ ವೇಳೆ ಮಳಲಿಯ ಮಸೀದಿ ಸ್ಥಳದಲ್ಲಿ ದೈವೀ ಶಕ್ತಿ ಇರುವುದು ನಿಜ ಎಂದು ಕೇರಳದ ಪ್ರಖ್ಯಾತ ಜ್ಯೋತಿಷಿ ಜಿ.ವಿ. ಗೋಪಾಲಕೃಷ್ಣ ಪಣಿಕ್ಕರ್ ಮಾಹಿತಿ ನೀಡಿದ್ದಾರೆ..

Advertisement. Scroll to continue reading.

ಮಸೀದಿ ಇರುವು ಜಾಗದಲ್ಲಿ ದೇವಸ್ಥಾನ ಇದ್ದದ್ದು ನಿಜ. ಸಾಮಾನ್ಯ ತಾಂಬೂಲ ಪ್ರಶ್ನೆ ಪೂರ್ಣವಾಗಿ ಚೈತ್ಯನ್ಯದಿಂದ ಕೂಡಿದೆ. ನಾವು ಪ್ರಾರ್ಥಿಸಿದ ರಾಶಿಯಲ್ಲಿ ದೇವರು ಇರುವುದು ನಿಜ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು ಎಂದು ತಿಳಿಯುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದು ದೈವ ಸಾನಿಧ್ಯ ಇದ್ದಂತಹ ಸ್ಥಳ, ತಾಂಬೂಲ ಪ್ರಶ್ನೆಯಲ್ಲಿ ಹಿಂದೂ ಧಾರ್ಮಿಕ ಸ್ಥಳ ಎಂದು ಉತ್ತರ ಬಂದಿದೆ. ಇಲ್ಲಿ ಗುರುಪೀಠ ಇತ್ತು. ಯಾವುದೋ ಒಂದು ಕಾಲದಲ್ಲಿ ದೇವಸ್ಥಾನ ಇತ್ತೆಂದು ತಿಳಿಯುತ್ತಿದೆ. ಈಗ ಮೇಲೆದ್ದು ಬಂದಿದೆ. ವಿವಾದದಿಂದ ದೇವಸ್ಥಾನ ನಾಶವಾಗಿದೆಯೆಂದು ತಿಳಿದುಬಂದಿದೆ. ಎತ್ತರದ ಜಾಗದಲ್ಲಿ ಮಹಾತಪಸ್ವಿ ತಪಸ್ಸು ಮಾಡಿದ್ದಾನೆ.ಪೂರ್ಣ ಮಾಹಿತಿ ತಿಳಿಯಲು ತಾಂಬೂಲ ಪ್ರಶ್ನೆ ಸಾಕಾಗದು. ಅಷ್ಟಮಂಗಲ ಪ್ರಶ್ನೆ ಮೂಲಕ ನಿಖರ ಮಾಹಿತಿ ಸಿಗಲಿದೆ ಎಂದು ಹೇಳಿದ್ದಾರೆ.

ಆದಷ್ಟು ಬೇಗ ಸಾನಿಧ್ಯದ ಕೆಲಸಗಳು ನಡೆಯಬೇಕು. ಇಲ್ಲವಾದಲ್ಲಿ ಊರಿಗೆ ಕೆಡುಕುಂಟಾಗುತ್ತದೆ. ಶಾಂತಿ ನೆಲೆಸಲು ದೇವರ ಕಾರ್ಯ ನಡೆಯಬೇಕು ಎಂದು ಹೇಳಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

error: Content is protected !!