ಉಡುಪಿ : ದೊಡ್ಡಣಗುಡ್ಡೆ ಪಂಚ ಜುಮಾದಿ ದೈವಸ್ಥಾನದ ಶೆಟ್ಟಿ ಬಾಲೆ ಹಾಗೂ ದೈವಸ್ಥಾನದ ಆಡಳಿತ ಮಂಡಳಿ ಟ್ರಸ್ಟಿ ಸದಸ್ಯ ಗೋಪಾಲ ಶೆಟ್ಟಿ ಪಾದಮನೆ ಕರಂಬಳ್ಳಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಮೃತರು ಹಿರಿಯ ಕಾಂಗ್ರೆಸ್ ನಾಯಕರು, ಮಾಜಿ ಮಂಡಲ ಪ್ರಧಾನರು, ಉತ್ತಮ ಕೃಷಿಕರು, ಕೃಷಿ ಕ್ಷೇತ್ರದಲ್ಲಿ ಸಾಧನೆಗೈದವರು. ದೊಡ್ಡಣಗುಡ್ಡೆ ಪಂಚಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ದೊಡ್ಡಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕರಂಬಳ್ಳಿ ಗೋಪಾಲ ಶೆಟ್ಟಿ ಅವರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಉಡುಪಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ದಿನೇಶ್ ಪುತ್ರನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ದಿವಾಕರ್ ಕುಂದರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಜತ್ತನ್ನ, ಯತೀಶ್ ಕರ್ಕೇರ, ಹರೀಶ್ ಕಿಣಿ, ಮುಖಂಡರಾದ ಗಣೇಶ್ ದೇವಾಡಿಗ, ಗಣೇಶ್ ನೆರ್ಗಿ, ನಾರಾಯಣ್ ಕುಂದರ್, ಕುಶಾಲ್ ಶೆಟ್ಟಿ ಇಂದ್ರಾಳಿ, ನರಸಿಂಹಮೂರ್ತಿ, ಸತೀಶ್ ಕುಮಾರ್ ಮಂಚಿ, ಆರ್.ಕೆ ರಮೇಶ್ ಪೂಜಾರಿ, ಸಾಯಿರಾಜ್ ಕಿದಿಯೂರು, ಶರತ್ ಶೆಟ್ಟಿ ಬೆಳ್ಕಳೆ, ಹಮ್ಮಾದ್ ಮುಂತಾದವರು ಸಂತಾಪ ಸೂಚಿಸಿದರು.