ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಮುದ್ರಾಡಿ ನಾಟ್ಕದೂರು ಅಭಯಹಸ್ತೆ ಶ್ರೀ ಆದಿಶಕ್ತಿ ದೇವಸ್ಥಾನದ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವದ ಬಳಿಕ ದೃಢ ಕಲಶದ ಮತ್ತು ಪಟ್ಟಾಭಿಷೇಕದ ಕಾರ್ಯಕ್ರಮಗಳು ಗುರುವಾರದಿಂದ ಶನಿವಾರದವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದ್ದು,
ನಿನ್ನೆ ಸಂಜೆ ಶ್ರೀಕ್ಷೇತ್ರದಲ್ಲಿ ಧಾರ್ಮಿಕ ಸಭೆ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಗಣಿ ಮತ್ತು ಕಲ್ಲು ಕ್ರಷರ್ ಮಾಲಕರ ಸಂಘ ಬೆಂಗಳೂರು ಇದರ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಇವರು ವಹಿಸಿದ್ದರು.
ಅತಿಥಿಗಳಾಗಿ ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್, ಸೀತಾನದಿ ವಿಠ್ಠಲ ಶೆಟ್ಟಿ, ರಂಗ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲು, ಧರ್ಮದರ್ಶಿ ಸೋಮನಾಥ್ ಶಾಂತಿ ಉಪಸ್ಥಿತರಿದ್ದರು.
ರಂಗ ನಿರ್ದೇಶಕ ಜಗದೀಶ್ ಜಾಲ ಬೆಂಗಳೂರು ಇವರು ಸ್ವಾಗತಿಸಿ, ಶ್ರೀ ಕ್ಷೇತ್ರದ ಆಡಳಿತ ಮುಕ್ತೇಸರ ಸುಕುಮಾರ್ ಮೋಹನ್ ವಂದಿಸಿದರು.
Advertisement. Scroll to continue reading.
In this article:Diksoochi news, diksoochi Tv, diksoochi udupi, Mudradi Adishakthi Temple
Click to comment