ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ಭಾರತದ ತಂಡದ ನಾಯಕ ಕೆ.ಎಲ್.ರಾಹುಲ್ ಗಾಯದ ಕಾರಣ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜೂ.9 ರಿಂದ ಆರಂಭಗೊಳ್ಳಲಿರುವ ಸರಣಿ ಆರಂಭಿಕ ಪಂದ್ಯಕ್ಕೆ ಒಂದು ದಿನ ಮುಂಚಿತವಾಗಿ ಈ ಮಾಹಿತಿ ಹೊತಬಿದ್ದಿದೆ. ಹೀಗಾಗಿ ರಿಷಭ್ ಪಂತ್ ತಂಡದ ನಾಯಕರಾಗಲಿದ್ದಾರೆ.
ಗಾಯದ ಕಾರಣದಿಂದ #INDvSA ಸರಣಿಯಿಂದ KL ರಾಹುಲ್ ಮತ್ತು ಕುಲದೀಪ್ ಯಾದವ್ ಹೊರಗುಳಿದಿದ್ದಾರೆ. ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ @Paytm #INDvSA ವಿರುದ್ಧದ ತವರು ಸರಣಿಗೆ ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ನಾಯಕ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ.
ಬಲ ತೊಡೆಸಂದು ಗಾಯದಿಂದಾಗಿ ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಐ ಸರಣಿಯಿಂದ ಹೊರಗುಳಿದಿದ್ದಾರೆ, ಆದರೆ ಕುಲದೀಪ್ ಯಾದವ್ ನಿನ್ನೆ ಸಂಜೆ ನೆಟ್ಸ್ನಲ್ಲಿ ಬ್ಯಾಟಿಂಗ್ ಮಾಡುವಾಗ ಬಲಗೈಗೆ ಪೆಟ್ಟಾದ ಕಾರಣ ಟಿ 20 ಐ ಸರಣಿಯಿಂದ ಹೊರಗುಳಿಯಲಿದ್ದಾರೆ. ಎಂದು ಬಿಸಿಸಿಐ ಮಾಹಿತಿ ನೀಡಿದೆ.