Connect with us

Hi, what are you looking for?

ರಾಜ್ಯ

ಶಿವಮೊಗ್ಗ : ದೇಶಸೇವೆಗಾಗಿ ಅಗ್ನಿಪಥ್ ಯೋಜನೆ ಜಾರಿ : ಸಂಸದ ಬಿ.ವೈ.ರಾಘವೇಂದ್ರ

1

ವರದಿ : ದಿನೇಶ್ ರಾಯಪ್ಪನಮಠ

ಶಿವಮೊಗ್ಗ : ನವ ಭಾರತವು ನವ ಶಕ್ತಿಯೊಂದಿಗೆ ಮುನ್ನಡೆಯಲಿದೆ. ಯುವಕರ ಸಬಲೀಕರಣಕ್ಕೆ ನರೇಂದ್ರ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ನೀಡಿದೆ. ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 10 ಲಕ್ಷ ಹುದ್ದೆಗೆ ಒಂದೂವರೆ ವರ್ಷದೊಳಗೆ ತುರ್ತು ನೇಮಕಾತಿ ಮಾಡುವಂತೆ ಸೂಚಿಸಿದ್ದಾರೆ ಹಾಗೂ ಸೇನೆಗೆ 46,000 ಅಗ್ನಿ ವೀರರನ್ನು 4 ವರ್ಷದ ಸೇವಾವಧಿಯನ್ನು ನೇಮಕ ಮಾಡಿಕೊಳ್ಳಲಿದೆ.
‘ಅಗ್ನಿ ಪಥ್ ‘ ಯೋಜನೆ ಜಾರಿಗೆ ತಂದಿರುವುದು. ನಮ್ಮ ಉತ್ಸಾಹಿ ದೇಶಭಕ್ತ ಯುವಕರಿಗೆ ಸೇನೆಗೆ ಸೇರುವ ಸದಾವಕಾಶವನ್ನು ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದೀಜಿ ಅವರಿಗೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಹಾಗೂ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್‌ ವರಿಗೆ ಧನ್ಯವಾದವನ್ನು ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದ್ದಾರೆ.

ಇದು ಯುವಕರ ಪಾಲಿಗೆ ಕೇವಲ ಉದ್ಯೋಗಾವಕಾಶವಲ್ಲ. ಶಿಸ್ತು, ಮ್ಯಾನೇಜ್ಮೆಂಟ್, ಜೀವನ ಕೌಶಲ್ಯಗಳನ್ನು
ಮೈಗೂಡಿಸಿಕೊಳ್ಳೋದಕ್ಕೆ ಭಾರತೀಯ ಸೇನೆಗಿಂತ ಉತ್ತಮ ಸ್ಥಳ ಇನ್ನೊಂದಿಲ್ಲ. ಸದೃಢ ಸಮಾಜ ನಿರ್ಮಾಣಕ್ಕೆ ಅಡಿಪಾಯ ಹಾಕುತ್ತಿರುವ ಕ್ರಾಂತಿಕಾರಿ ಹೆಜ್ಜೆ ಇದಾಗಿದೆ.

Advertisement. Scroll to continue reading.

‘ಅಗ್ನಿಪಥ’ ಯೋಜನೆಯಡಿ ‘ಅಗ್ನಿವೀರ’- ಸ್ವಯಂ ಸೇವಕರಾಗಿ ಆಯ್ಕೆಯಾಗಲು ಎಸ್.ಎಸ್.ಎಲ್.ಸಿ. ಪಾಸಾದ 17.5 ರಿಂದ 21 ರ ನಡುವಿನ ವಯೋಮಾನದವರು ಅರ್ಹರು. ‘ಅಗ್ನಿವೀರರಿಗೆ’ ಸಶಸ್ತ್ರ ಪಡೆಗಳಲ್ಲಿ ದೇಶಕ್ಕಾಗಿ 4 ವರ್ಷಗಳ ಕಾಲ ಸೇವೆ ಸಲ್ಲಿಸುವ ಸುವರ್ಣಾವಕಾಶವಿದೆ.

ಸಶಸ್ತ್ರ ಪಡೆಗಳಾದ ಭೂಸೇನೆ, ವಾಯುಸೇನೆ ಹಾಗೂ ನೌಕಾ ಪಡೆಗಳಲ್ಲಿ ಸೇವೆ ಸಲ್ಲಿಸಬಹುದು. 4 ವರ್ಷಗಳ ಬಳಿಕ ಅರ್ಹತ- ಫಿಟ್‌ನೆಸ್ ಆಧರಿಸಿ ಶೇ. 25 ಅಗ್ನಿವೀರರುಗಳ ಮರು-ಸೇರ್ಪಡೆ- ಸೇವಾ ಮುಂದುವರಿಕೆಗೂ ಅವಕಾಶವಿದೆ.

ಹೆಚ್ಚಿನ ಮಾಹಿತಿಯನ್ನು ಕೆಳಗಿನ ಲಿಂಕ್ ಮೂಲಕ ಪಡೆದು ದೇಶ ಸೇವೆಗೆ ನಮ್ಮ ಯುವಕ/ಯುವತಿಯುರು ಉತ್ಸಾಹ ತೋರಿಸುವಂತೆ ಸಂಸದ ಬಿ.ವೈ. ರಾಘವೇಂದ್ರರವರು ಕರೆ ನೀಡಿದ್ದಾರೆ.

https://www.mod.gov.in/

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!