ಉಚ್ಚಿಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಚ್ಚಿಲ ಗ್ರಾಮ ಸಮಿತಿ ವತಿಯಿಂದ ಪಕ್ಷದ 13 ನೇ ವರ್ಷದ ಸಂಸ್ಥಾಪನಾ ದಿನವನ್ನು ಮಂಗಳವಾರ ಬೆಳಿಗ್ಗೆ ಉಚ್ಚಿಲದಲ್ಲಿ ಆಚರಿಸಲಾಯಿತು.
ಎಸ್ಡಿಪಿಐ ಉಚ್ಚಿಲ ಗ್ರಾಮ ಸಮಿತಿ ಅಧ್ಯಕ್ಷ ಶರೀಫ್ ಹುಸೈನಾರ್ ಧ್ವಜಾರೋಹಣ ಕಾರ್ಯಕ್ರಮವನ್ನು
ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಎಸ್ಡಿಪಿಐ ಜನರ ಸಮಸ್ಯೆಗಳಿಗೆ ಪರಿಹಾರವಾಗಿದೆ. ಮುಂದಿನ ದಿನಗಳಲ್ಲಿ ಎಸ್ಡಿಪಿಐ ಬೆಂಬಲಿತ ಶಾಸಕರ ಕನಸು ನಮ್ಮದು. ಇದಕ್ಕಾಗಿ ಪಕ್ಷಕ್ಕೆ ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಪಡಿಸುವಲ್ಲಿ ತಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದರು.
ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಮಜೀದ್ ಪೊಲ್ಯ ಮತನಾಡಿ,ದೇಶದಲ್ಲಿ ನಕಲಿ ಜಾತ್ಯತೀತ ಪಕ್ಷಗಳು ಕೋಮುವಾದಿಗಳೊಂದಿಗೆ ಕೈಜೋಡಿಸಿಕೊಂಡಿದೆ.
ಇದಕ್ಕೆ ಪರಿಹಾರವಾಗಿ ಹಸಿವು ಮತ್ತು ಭಯ ಮುಕ್ತ ಸ್ವಾತಂತ್ರ್ಯದ ಕನಸು ಹೊತ್ತುಕೊಂಡು ದೇಶದಲ್ಲಿ ಬಲಾಢ್ಯ ಪಕ್ಷವಾಗಿ ಬೆಳೆದು ನಿಂತಿರುವ ಎಸ್ಡಿಪಿಐ ಪಕ್ಷವು ದೇಶದ ಮೂಲೆ ಮೂಲೆಗಳಲ್ಲಿ ಜನಪರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ರಝಾಕ್ ವೈ.ಎಸ್,ಎಸ್ಡಿಪಿಐ ಉಚ್ಚಿಲ ಗ್ರಾಮ ಸಮಿತಿ ಉಪಾಧ್ಯಕ್ಷ ಇಬ್ರಾಹಿಂ ಅರ್ಶ್, ಉಚ್ಚಿಲ ಗ್ರಾ.ಪಂ ಎಸ್ಡಿಪಿಐ ಬೆಂಬಲಿತ ಸದಸ್ಯ ಆಸೀಫ್ ವೈಸಿ ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.
ಎಸ್ಡಿಪಿಐ ಮುಖಂಡ ಇಸ್ಮಾಯಿಲ್ ಉಸ್ತಾದ್ ಕಾರ್ಯಕ್ರಮ ನಿರೂಪಿಸಿದರು.