Connect with us

Hi, what are you looking for?

Diksoochi News

ಸಿನಿಮಾ

ಗಾಬರಿ ಪಡುವ ಅಗತ್ಯವಿಲ್ಲ, ದಿಗಂತ್ ಆರೋಗ್ಯವಾಗಿದ್ದಾರೆ : ನಿರ್ದೇಶಕ ಯೋಗರಾಜ್ ಭಟ್

2

ಬೆಂಗಳೂರು: ನಟ ದಿಂಗತ್ ಸ್ಥಿತಿ ಗಂಭೀರವಾಗಿಲ್ಲ. ಅವರು ಅರಾಮಾಗಿದ್ದಾರೆ. ಅವರಿಗೆ ಯಾವುದೇ ಗಂಭೀರವಾದ ಗಾಯವಾಗಿಲ್ಲ. ದಿಗಂತ್ ತಂದೆ ಹಾಗೂ ನಾನು ಅವರನ್ನು ಮಾತನಾಡಿಸಿಕೊಂಡು ಬಂದಿದ್ದೇವೆ. ಲವಲವಿಕೆಯಿಂದ ಇದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ನಿರ್ದೇಶಕ ಯೋಗರಾಜ್ ಭಟ್ ಹೇಳಿದರು‌

ಈ ಬಗ್ಗೆ ಮಣಿಪಾಲ್ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದೀಗ ಕತ್ತಿನ ಭಾಗಕ್ಕೆ ಪೆಟ್ಟಾಗಿರೋ ಕಾರಣ ಶಸ್ತ್ರ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಟ ದಿಗಂತ್ ಆರೋಗ್ಯವಾಗಿದ್ದಾರೆ. ಅವರೊಂದಿಗೆ ಈಗ ತಾನೇ ಮಾತನಾಡಿಸಿಕೊಂಡು ಬಂದ್ವಿ. ಅವರ ತಂದೆ ಕೂಡ ಮಾತನಾಡಿಸಿದ್ರು. ಗೋವಾದ ಸಮುದ್ರದ ದಡದಲ್ಲಿ ಸ್ಟಂಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ಕತ್ತಿನ ಭಾಗಕ್ಕೆ ಸಣ್ಣ ಪೆಟ್ಟಾಗಿದೆ ಅಷ್ಟೇ.

Advertisement. Scroll to continue reading.

ಅವರ ಕತ್ತಿನ ಭಾಗಕ್ಕೆ ಆಗಿರುವಂತ ಗಾಯಕ್ಕೆ ಶಸ್ತ್ರ ಚಿಕಿತ್ಸೆಯನ್ನು ವೈದ್ಯರು ನಡೆಸಲಿದ್ದಾರೆ. ಆ ಬಳಿಕ ಮತ್ತೆ ಅರಾಮಾಗಲಿದ್ದಾರೆ. ನಟ ದಿಗಂತ್ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಯಾರೂ ಹೆದರುವಂತದ್ದು ಏನೂ ಆಗಿಲ್ಲ. ನಟ ದಿಗಂತ್ ಚೆನ್ನಾಗಿದ್ದು, ಶಸ್ತ್ರ ಚಿಕಿತ್ಸೆಯ ಬಳಿಕ ಸರಿಯಾಗಲಿದ್ದಾರೆ ಎಂದರು.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!