Connect with us

Hi, what are you looking for?

Uncategorized

ಕುಂದಾಪುರ : ಖಾಸಗಿ ಸಾರಿಗೆ ನೌಕರರ ಸಂಘದಿಂದ ಪ್ರತಿಭಟನೆ

1

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಆಟೋ ಹಾಗೂ ಖಾಸಗಿ ಸಾರಿಗೆ ನೌಕಕರ ಸಮಸ್ಯೆ ಪರಿಹಾರ ಮಾಡುವಂತೆ ಇಲ್ಲಿನ ತಾಲೂಕು ಆಟೋರಿಕ್ಷಾ ಮಜ್ದೋರ್ ಸಂಘ ಗುರುವಾರ ಶಾಸ್ತ್ರಿ ವೃತ್ತದದಿಂದ ಮೆರವಣಿಗೆ ಪ್ರತಿಭಟನೆ ನಡೆಸಿ, ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಖಾಸಗಿ ಸಾರಿಗೆ ನೌಕರರ ಹಿತರಕ್ಷಣೆಗಾಗಿ ಕಲ್ಯಾಣ ಮಂಡಳಿ ರಚನೆ, ಪಿಂಚಣಿ, ಇಎಸ್‍ಐ, ಪಿಎಫ್ ಸೌಲಭ್ಯ, ಚಾಲಕರಿಗೆ ಆಯುಷ್ಮಾನ್ ಭಾರತ್ ಜಾರಿ, ಇ ಶ್ರಮ ಗುರುತಿನ ಚೀಟಿ, ಬ್ಯಾಂಕ್ ಮೂಲಕ ವಿಮಾ, ನೈಸರ್ಗಿಕ ವಿಮಾ ಸೌಲಭ್ಯ ನೀಡುವಂತೆ ಸಂಘಟನೆ ಒತ್ತಾಯಿಸಿತು.

ವಾಹನ ವಿಮಾ ಮೊತ್ತದಲ್ಲಿ ಶೇ.50ರಷ್ಟು ಕಡಿತ ಮಾಡಿ ತಕ್ಷಣ ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಆಟೋ ಮಜ್ದೂರ್ ಸಂಘ ಗೌರವಾಧ್ಯಕ್ಷ ಸುರೇಶ್ ಪುತ್ರನ್, ಅಧ್ಯಕ್ಷ ಮಂಜುನಾಥ ಟಿಟಿ ರಸ್ತೆ, ಕಾರ್ಯದರ್ಶಿ ರವಿ ಪುತ್ರನ್, ಉಪಾಧ್ಯಕ್ಷರಾದ ಭಾಸ್ಕರ ಖಾರ್ವಿ ಬಸ್ರೂರು ಕೆರೆಕಟ್ಟೆ, ಆಶೋಕ್, ಕೋಶಾಧಿಕಾರಿ ಶ್ರೀಧರ ಮೊಗವೀರ, ಪುರಸಭೆ ಸದಸ್ಯ ಸಂತೋಷ ಶೆಟ್ಟಿ, ಪುರಸಭೆ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!