Connect with us

Hi, what are you looking for?

Diksoochi News

ರಾಜ್ಯ

ಪರಿಷ್ಕೃತ ಪಠ್ಯವನ್ನು ಹಿಂಪಡೆಯುವುದಿಲ್ಲ : ಸಚಿವ ಆರ್.ಅಶೋಕ್

1

ಬೆಂಗಳೂರು : ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಶಾಲಾ ಪಠ್ಯವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಪಠ್ಯಪರಿಷ್ಕರಣೆಯಲ್ಲಿ 7-8 ದೋಷಗಳಿದ್ದು, ಸರಿಪಡಿಸಿ 10 ದಿನದೊಳಗೆ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು. ಯಾವುದೇ ಕಾರಣಕ್ಕೂ ಪರಿಷ್ಕೃತ ಪಠ್ಯವನ್ನು ಹಿಂಪಡೆಯುವುದಿಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್. ಅಶೋಕ್, ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪರಿಷ್ಕರಣೆಯಲ್ಲಿ ಏಳೆಂಟು ಸಣ್ಣ ದೋಷಗಳಿವೆ. ಅವುಗಳನ್ನು ಸರಿಪಡಿಸಿ 10 ದಿನದೊಳಗೆ ವಿದ್ಯಾರ್ಥಿಗಳಿಗೆ ವಿತರಣೆ ಮಾಡುವ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಸಿದ್ದರಾಮಯ್ಯ ಸರ್ಕಾರವಿದ್ದಾಗ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ್ದ ಪಠ್ಯ ಪರಿಷ್ಕರಣೆಯಲ್ಲಿ 150 ದೋಷಗಳು ಇದ್ದವು. ಆದರೂ ಅವರು ಹೊಸ ಪಠ್ಯ ಮುದ್ರಿಸಿರಲಿಲ್ಲ. ಆ ಬಗ್ಗೆ ಯಾರೂ ಚಕಾರವನ್ನೂ ಎತ್ತಿರಲಿಲ್ಲ. ಇದೀಗ ಅಲ್ಪಸಂಖ್ಯಾತರನ್ನು ಓಲೈಸಿ ಹಿಂದೂಗಳನ್ನು ಕೀಳಾಗಿ ತೋರಿಸಿರುವ ಅಂಶಗಳನ್ನು ಕಿತ್ತು ಹಾಕಿದ್ದರಿಂದ ವಿರೋಧ ಮಾಡಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

Advertisement. Scroll to continue reading.

ಇದೇ ವೇಳೆ ಪ್ರೊ.ಜಿ.ಎಸ್‌.ಮುಡಂಬಡಿತ್ತಾಯ, ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗಳ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ಪಠ್ಯಗಳ ರಚನೆ, ಪರಿಷ್ಕರಣೆ, ಮರು ಪರಿಷ್ಕರಣೆ ವಿಷಯಗಳಿಗೆ ಸಂಬಂಧಪಟ್ಟಂತೆ ಹೋಲಿಕೆ ಮತ್ತು ವ್ಯತ್ಯಾಸಗಳ ವಿವರವುಳ್ಳ 200ಕ್ಕೂ ಹೆಚ್ಚು ಪುಟಗಳ ಕೈಪಿಡಿ ಬಿಡುಗಡೆ ಮಾಡಿದರು.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ಇತರೆ

0 ನ್ಯೂಯಾರ್ಕ್‌: ಸಲಿಂಗ ಜೋಡಿಯಾಗಿ ಮದುವೆಯಾಗಲು ಹೊರಟು ಭಾರೀ ಸುದ್ದಿಯಾಗಿದ್ದ ಸಾಮಾಜಿಕ ಮಾಧ್ಯಮ ಇನ್‌ಫ್ಲ್ಯುಯೆನ್ಸರ್‌ ಗಳಾದ ಭಾರತ ಮೂಲದ ಅಂಜಲಿ ಚಕ್ರ ಮತ್ತು ಪಾಕಿಸ್ತಾನ ಮೂಲದ ಸೂಫಿ ಮಲಿಕ್‌ ಅವರ ಮದುವೆ ಮುರಿದುಬಿದ್ದಿದೆ! 2019ರಲ್ಲಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

error: Content is protected !!